Tuesday 22 December 2020

Vajpayee's Birthday, His poem's Kannada Version

ರಾಜ್ಯೋತ್ಸವ 


Greetings to all our friends on the occasion of birthday of our former Prime Minister           Bharat Ratna Atal Bihari Vajpayeeji.  Connoisseurs of literature lament that Vajpayeeji's going to politics is a loss to the world of literature.  Still versatile Vajpayeeji never missed his time with literature, besides his active role in Indian politics. He was a great poet. All his poems carry great messages to the entire humanity. 

I have chosen his poem 'Kadam Milakar Chalna Hoga' which conveys the apt message in carrying our fight with Corona and other national issues.  His poem's Hindi and English versions as presented by 'http://cifarshayar.blogspot.com/2015/04/kadam-milakar-chalna-hoga.html' is given below and it is followed by my translation of the poem into my mother tongue Kannada. 

Vajpayeeji had a unique style of reciting his poems for inspiring us.  The link of his recital of the present poem in Hindi is available down below. I too have recited my Kannada version of the poem, the link of which is also available below.  I request you all to listen to both the recitals and give me your feedback.  
                                                                                ******


बाधाएँ आती हैं आएँ, घिरें प्रलय की घोर घटाएँ,
पावों के नीचे अंगारे, सिर पर बरसें यदि ज्वालाएँ,
निज हाथों में हँसते-हँसते, आग लगाकर जलना होगा।
क़दम मिलाकर चलना होगा।
Badhaein aati hain aayein, Ghirein pralay ki ghor ghataein,
Pavon ke neeche angarey, Sir par barsein yadi jwalaein,
Nij hatho mein haste-haste, Aag lagakar jalna hoga.
Kadam milakar chalna hoga.

Let the obstacles come, Let the disaster be gruesome
Embers under the feet, Let fire shower make you numb,
We have to laughingly burn our own hands together,
We have to walk together

हास्य-रूदन में, तूफ़ानों में, अगर असंख्यक बलिदानों में,
उद्यानों में, वीरानों में, अपमानों में, सम्मानों में,
उन्नत मस्तक, उभरा सीना, पीड़ाओं में पलना होगा।
क़दम मिलाकर चलना होगा।
Hasya-rudan mein, toofano mein, Agar asankhyak balidanon mein,
Udhayanon mein, virano mein, Apmanon mein, sammanon mein,
Unnat mastak ubhra seena, Pidaon mein palna hoga.
Kadam milakar chalna hoga.

In laughter-cry, In storms, If in the countless sacrifices,
In gardens, In barren, In insults, In praises,
Advanced mind, emerged chest, we have to live in pain together,
We have to walk together

उजियारे में, अंधकार में, कल कहार में, बीच धार में,
घोर घृणा में, पूत प्यार में, क्षणिक जीत में, दीर्घ हार में,
जीवन के शत-शत आकर्षक, अरमानों को ढलना होगा।
क़दम मिलाकर चलना होगा।
Ujiyare mein, Andhkar mein, Kal kahar mein, beech dhaar mein,
Ghor ghrina mein, poot pyaar mein, Shadink jeet mein, Deergh haar mein,
Jeevan ke shat-shat aakarshak, Armano ko dhalna hoga.
Kadam milakar chalna hoga.

In light, In darkness, In shore, In midstream,
In abject hatred, In son's love, In momentary victory, In long defeat,
Attractive terms of life's condition, our aspirations have to be molded together,
We have to walk together

सम्मुख फैला अगर ध्येय पथ, प्रगति चिरंतन कैसा इति अब,
सुस्मित हर्षित कैसा श्रम श्लथ, असफल, सफल समान मनोरथ,
सब कुछ देकर कुछ न मांगते, पावस बनकर ढ़लना होगा।
क़दम मिलाकर चलना होगा।
Sammukh faila agar dhyay path, Pragrati chirantan kaisa iti ab,
Susmit harshit kaisa shram shlath, Asafal, Safal samaan manorath,
Sab kuch dekar kuch na maangte, Pawas bankar dhalna hoga.
Kadam milakar chalna hoga.

If contemplative path is spread in front,Progress without end what is now dead,
How happy joyful is labor flaccid, having equal desire for failure and success,
Don't ask for anything after giving everything, have to adjust like water together,
We have to walk together.

कुछ काँटों से सज्जित जीवन, प्रखर प्यार से वंचित यौवन,
नीरवता से मुखरित मधुबन, परहित अर्पित अपना तन-मन,
जीवन को शत-शत आहुति में, जलना होगा, गलना होगा।
क़दम मिलाकर चलना होगा।
Kuch kanto se sajjit jeevan, Prakhar pyaar se vanchit yovan,
Neeravta se mukhrit madhuban, Parhit arpit apna tan-man,
Jeevan ko shat-shat aahuti mein, Jalna hoga, galna hoga.
Kadam milakar chalna hoga.

A life fitted with thorns, A precocious youth deprived of love,
A garden expressed with calmness, selflessly devoting body and soul,
Life have to be burned, melted in hundreds of offerings.
We have to walk together.

Recitation of poem by Sh. Atal Bihari Vajpayee

 ವಾಜಪೇಯೀಯವರ 

ಹುಟ್ಟುಹಬ್ಬದ ಸಂದೇಶ 

25-12-2020

ಜೊತೆ ಜೊತೆ ಸಾಗೋಣ 

(ವಾಜಪೇಯೀ ವಿರಚಿತ 

'ಕದಂ ಮಿಲಾಕರ್ ಚಲನಾ  ಹೋಗ' 

ಕವನದ ಭಾವಾನುವಾದ)

***

ವಿಘ್ನಗಳಿರಲಿ, ಪ್ರಳಯವೇ ಬರಲಿ 

 ಕಾಲಡಿಯಲ್ಲೇ  ಕೆಂಡಗಳಿರಲಿ 

ಬೆಂಕಿಯ ಮಳೆಯು ತಲೆಯನೆ ಸುಡಲಿ 

ಸುಡುಗೆಂಡವನೆ ಕರದಲಿ ಪಿಡಿದು 

                                 ನಗುತ ನಡೆಯೋಣ

ಜೊತೆ ಜೊತೆ ಸಾಗೋಣ 


ಅಳು-ನಗುಗಳ ಅಲೆಯಲ್ಲಿ

                         ಬಿರುಗಾಳಿಯ  ಸುಳಿಯಲ್ಲಿ 

ಎಣಿಕೆಗೆ ಸಿಲುಕದ ಬಲಿದಾನದಲಿ 

ಹಸಿರು ಬನದಲಿ, ಬಂಜರು ಮಣ್ಣಲಿ 

ಅಪಮಾನದಲಿ, ಬಹುಮಾನದಲಿ 

ಉನ್ನತ ಜ್ಞಾನದ ಅಭಿಮಾನದಲಿ 

ನೋವ್ಗಳ ನಡುವೆಯೇ ಬಾಳೋಣ 

ಜೊತೆ ಜೊತೆ ಸಾಗೋಣ 


ಹಗಲಿರಲಿ, ಇರುಳಿರಲಿ 

ದಡವಿರಲಿ, ನಡುನೀರಿರಲಿ 

ಧಿಕ್ಕಾರವಿರಲಿ, ಜೈಕಾರವಿರಲಿ 

ಕಿರುಗೆಲುವಿರಲಿ, ಕಾಡುವ ಸೋಲಿರಲಿ 

ನೂರಾರು ಆಶಯಗಳ 

                                  ಹೊತ್ತು ನಡೆಯೋಣ 

ಜೊತೆ ಜೊತೆ ಸಾಗೋಣ 


ತಲಪುವ ದಾರಿ ಕಾಣುತಲಿರಲು 

ಚಿರಂತನ ಪ್ರಗತಿಗೆ ಎಣೆಯೆಲ್ಲಿ?

ಸೋಲು-ಗೆಲುವುಗಳ ನಡುವಿನಲಿ  

ಶ್ರಮಿಕನ ಮುಖದಲಿ ನಗುವಿರಲಿ 

ಎಲ್ಲವ ಕೊಟ್ಟು, ಏನನು ಬೇಡದ 

ಜಲಧಾರೆಯಂತೆ ಹರಿಯೋಣ 

ಜೊತೆ ಜೊತೆ ಸಾಗೋಣ 


ನೀರವ ಮೌನದಿ ಮಡುಗಟ್ಟಿದ ವನ 

ವಂಚಿತ ಪ್ರೇಮದ ನೋವುಂಡ ಮನ 

ಮುಳ್ಳಿನ ಹಾದಿಯ ನಡುವೆಯೆ ಜೀವನ 

ಪರಹಿತಕಾಗೆ ಮೀಸಲು ತನು ಮನ 

ಶತ ಶತ ಆಹುತಿಗಳ ನೀಡೋಣ 

ಜೊತೆ ಜೊತೆ ಸಾಗೋಣ 

(ಭಾವಾನುವಾದ:

 ಲಕ್ಷ್ಮೀನಾರಾಯಣ ಕೆ.)

ಮೇಲಿನ ಕನ್ನಡ ಕವನದ ವಾಚನ ನಾನು ಮಾಡಿದ್ದೇನೆ. ದಯಮಾಡಿ ಆಲಿಸಿ 






Wednesday 25 November 2020

ಕವನೋತ್ಸವ  

(ರಚನೆ: ಲಕ್ಷ್ಮೀನಾರಾಯಣ ಕೆ.)

ಯಾರಿವರು?

***

ಮೂರ್ತಿ ಚಿಕ್ಕದಾದರೂ 

ಕೀರ್ತಿ ದೊಡ್ಡದಂತೆ 

ಮೊದಲಾಟದಲ್ಲೇ ಸಿಡಿಯಿತಂತೆ 

ಭರ್ಜರಿ ಚೊಚ್ಚಲ ಶತಕ 

ಬ್ಯಾಟಿಂಗ್ ಕಲೆಯ ನಿಪುಣನೀತ 

ನೂರೇರಿಸಿದಾಗೆಲ್ಲ ನಾವ್  ಸೋತಿಲ್ಲವಂತೆ 

'ವಿಶ್ವ'ಮಾನ್ಯ ಕನ್ನಡಿಗನೀತ 

ಸಜ್ಜನ ಕ್ರಿಕೆಟಿಗನಂತೆ 


ಕನ್ನಡ ಪ್ರೇಮಿ ಮಿತ್ರರೇ 

ನವೆಂಬರ್ ಕನ್ನಡ ಮಾಸದಾದಿಯಲ್ಲಿ 'ಪ್ರಕಾಶ ಶೆಟ್ಟರ ವ್ಯಂಗ್ಯೋತ್ಸವ'ದಲ್ಲಿ ಪಾಲುಗೊಂಡಿದ್ದೀರಿ. ಇದರಿಂದ ಪ್ರೇರಿತನಾದ ನಾನು, ಮಾಸಾಂತ್ಯಕ್ಕೆ ಉಳಿದಿರುವ ಒಂಬತ್ತು ದಿನಗಳ ಸದುಪಯೋಗ ಮಾಡಿಕೊಳ್ಳಲೆಂದು 'ಕವನೋತ್ಸವ'ವನ್ನು ಇಂದಿನಿಂದ ಆರಂಭಿಸುತ್ತಿದ್ದೇನೆ. ಪ್ರತಿದಿನ ಮಧ್ಯಾಹ್ನದ  ೧೨ ಘಂಟೆಯ ಹೊತ್ತಿಗೆ, ವಿವಿಧ ಕ್ಷೇತ್ರಗಳಲ್ಲಿ ಪ್ರಖ್ಯಾತರಾದ ಕನ್ನಡಿಗರೊಬ್ಬರ ಬಗ್ಗೆ ಕವನವೊಂದನ್ನು ರಚಿಸಿ ಪ್ರಸ್ತುತಪಡಿಸುತ್ತೇನೆ. ಆ ವ್ಯಕ್ತಿ ಯಾರೆಂಬುದನ್ನು ಗುರುತಿಸ ತಮ್ಮ ಉತ್ತರವನ್ನು ಕೆಳಗೆ ನೀಡಿ. ನಾಳಿನ ಮಧ್ಯಾಹ್ನದ ೧೨ರವರೆಗಿನ ಸರಿಯುತ್ತರಗಳಲ್ಲಿ 'ಲಕ್ಕಿ ಡಿಪ್' ಮುಖಾಂತರ ಆಯ್ಕೆಯಾದ ಮಹನೀಯರೊಬ್ಬರ ಚಿತ್ರವನ್ನು, ಅವರು ಗುರುತಿಸಿದ ಪ್ರಖ್ಯಾತ ವ್ಯಕ್ತಿಯ ಭಾವಚಿತ್ರದೊಂದಿಗೆ ಮರುದಿನ ಈ ಮಾಧ್ಯಮದಲ್ಲಿ ಪ್ರಕಟಿಸಲಾಗುವುದು. 'ಕವನೋತ್ಸವದಲ್ಲಿ ಭಾಗವಹಿಸಿ, ಕನ್ನಡತನ ಮೆರೆಯಿರಿ' ಎಂಬುದು ನನ್ನ ಅರಿಕೆ. 


ಕವನೋತ್ಸವ - ೨

***

ಯಾರಿವರು?

***

ಚಾಮಯ್ಯ ಮೇಷ್ಟ್ರ ಪ್ರೀತಿಯೇ 

ಶಿಷ್ಯನಿಗೆ ಮುಳುವಾಯ್ತೆ?


ಸದಾಶಿವರಾಯರ ಅತಿಯಕ್ಕರೆಯೂ 

ಮಿನುಗುತಾರೆಯ ಮೆರೆಸದಾಯ್ತೆ?


ದುರಂತಗಳಿಗೆ ಮುನ್ನುಡಿ ಬರೆವುದೆ 

ಇವರ ಪಾತ್ರವಾಯ್ತೆ?


'ನಮ್ಮ ಮಕ್ಕಳೀ'ತಂದೆ 

'ಸತ್ಯಮಾರ್ಗದಿ ನಡೆವ ಶಕ್ತಿ' ಬೇಡಿದರೇಕೆ?

(ರಚನೆ: ಲಕ್ಷ್ಮೀನಾರಾಯಣ ಕೆ.)

ಕವನೋತ್ಸವ - ೩

***

ಯಾರಿವರು?

***

ಹೆಸರಲಿ ಶಾಂತನಾದರೂ 

ಹೋರಾಟದ ಹಠವಂತನೆ?

ಕಾಗೋಡ ಗೂಡಿಗೆ ಲೋಹಿಯಾರ 

ಕರೆತಂದ ಭಗೀರಥನಿವನೆ?

'ಅವಸ್ಥೆ'ಯ ಶೋಷಿತನಿವ 

ಅರಸರ ಭೂಸುಧಾರಣೆಗೆ ಪ್ರೇರಣೆಯಾದನೆ?

ಏನವಸರವಿತ್ತೋ, ಬೇಗ ತೆರಳಿ 

ಉತ್ಸಾಹಿಗಳೇಕೆ ಅಲ್ಪಾಯುಗಳೆಂದೆಮ್ಮ ಕಾಡಿದನೆ?

(ರಚನೆ: ಲಕ್ಷ್ಮೀನಾರಾಯಣ ಕೆ.)


ಕವನೋತ್ಸವ - ೪

ಯಾರಿವರು?

***

ವಿಷವುಂಡವನ ಬೀಡ ನರ್ತಕಿಗೆ 

ಬೆಂಗಳೂರ ಬಿರುದೇಕೆ?

ಗೆಜ್ಜೆಪೂಜೆಗೆ ಕೊರಳೊಡ್ಡಿದರು, ನೃತ್ಯ, ಸಂಗೀತ 

ಸಾಹಿತ್ಯಗಳ  ಕರುಳಲೇ  ಪಡೆದಳೆ?

ತನು, ಮನ, ಧನಗಳ ಗಾನಗುರು ತ್ಯಾಗಯ್ಯಗರ್ಪಿಸಿ 

 ಅವರರಾಧನೆಗೆ ನಾಂದಿ ಹಾಡಿದಳೆ?

ಕೀಳೆಂಬ ಹಣೆಪಟ್ಟಿ ಹೊತ್ತು ಸೆಣಸಿ  

ಲೀನಳಾದಳಲ್ಲ ಗುರು ಚರಣದೊಳಗೆ!

(ರಚನೆ: ಲಕ್ಷ್ಮೀನಾರಾಯಣ ಕೆ.)


ಶಾಂತವೇರಿ ಗೋಪಾಲ ಗೌಡ 

ಕಿರು ಪರಿಚಯ 

*ಜನನ: ೧೯೨೩, ಅರಗ, ತೀರ್ಥಹಳ್ಳಿ, ಶಿವಮೊಗ್ಗ 

*ಸಮಾಜವಾದಿ ಲೋಹಿಯರವರ ಶಿಷ್ಯ 

*ಭೂರಹಿತ ರೈತರ ಹಕ್ಕುಗಳಿಗಾಗಿ 'ಕಾಗೋಡು ಚಳವಳಿ'ಯ ನೇತಾರ 

*ಯು.ಆರ್. ಅನಂತ ಮೂರ್ತಿಯವರು ಬರೆದ 'ಅವಸ್ಥೆ' ಕಾದಂಬರಿಯು ಇವರ ಹೋರಾಟದ ಕಥೆಯೆ.  ಈ ಕಾದಂಬರಿ ಮುಂದೆ ಸಿನಿಮಾವು ಆಯಿತು.  ಅನಂತ ನಾಗ್ ನಾಯಕರಾಗಿ ನಟಿಸಿದ್ದರು. 

*ಅವರ ಹೋರಾಟದಿಂದ ಮುಂದೆ ದೇವರಾಜ ಅರಸರು ಜಾರಿಗೆ ತಂದ  "ಉಳುವವನಿಗೆ ಭೂಮಿ" ಎಂಬ ಭೂಸುಧಾರಣೆಗೆ ಪ್ರೇರಣೆಯಾಯಿತು. 

*೧೯೫೨, ೬೨ ಮತ್ತು ೬೭ರಲ್ಲಿ ಮೂರು ಭಾರಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆ. 

*೧೯೭೨ರಲ್ಲಿ, ೪೯ರ ಪ್ರಾಯದಲ್ಲೇ ಅಕಾಲಿಕ ಮರಣ 


ಕವನೋತ್ಸವ - ೫

ಯಾರಿವರು?

***

ಬಿದಿರ ಪಿಡಿದಿಹನೀತ, ಎಲ್ಲರನು ರಂಜಿಪನು  

ಬಿದಿರ ನಾದೋಪಾಸನೆಯ ಆರಾಧಕನಿವನು 

ದಣಿದ ಮನಗಳ ತಣಿಸಿ ಮುದವ ನೀಡಲು 

ಬಿದಿರ ಚಿಣ್ಣರ ಸೈನ್ಯವನೆ ಕಟ್ಟಿಹನು 

ಕಲಾರ್ಣವದ ರಸಪಾಕ ಉಣ ಬಡಿಪನೀತ 

ಅದರ ಸ್ವಾದವನೊಮ್ಮೆ ಸವಿಯ ಬನ್ನಿ 

ನಮ್ಮವರೊಳಗಿನೀ ವಾಮನ ಮೂರ್ತಿ 

ತ್ರಿವಿಕ್ರಮನಾದ ಕಥೆಯ ತಿಳಿಯ ಬನ್ನಿ 

(ರಚನೆ: ಲಕ್ಷ್ಮೀನಾರಾಯಣ ಕೆ.)


ಕವನೋತ್ಸವ - ೫

ಸರಿಯುತ್ತರ: ವೇಣು ವಿದ್ವಾನ್ ಶ್ರೀ ಎಚ್. ಎಸ್. ವೇಣುಗೋಪಾಲ್ 

ವಿಜೇತರು: ಶ್ರೀ. 

ಅಭಿನಂದನೆಗಳು 

ವೇಣು ವಿದ್ವಾನ್ ಶ್ರೀ ಎಚ್. ಎಸ್. ವೇಣುಗೋಪಾಲ್

ಕಿರು ಪರಿಚಯ 

ಬೆಂಗಳೂರಿನ ಹಿರಿಯ ವೇಣುವಾದಕ ಶ್ರೀ. ಎಚ್. ಎಸ್. ವೇಣುಗೋಪಾಲರವರು, ಮೈಸೂರಿನ ಕೀರ್ತಿಶೇಷ ವೇಣು ವಿದ್ವಾನ್ ಎ. ವಿ. ಪ್ರಕಾಶ್ ರವರ ಶಿಷ್ಯರಲ್ಲಿ ಪ್ರಮುಖರು. ಕಳೆದ ೫ ದಶಕಗಳಿಂದ ಬೆಂಗಳೂರನ್ನು ತಮ್ಮ ಸಾಧನೆಯ ಕ್ಷೇತ್ರವನ್ನಾಗಿ ಮಾಡಿಕೊಂಡಿರುವ ಇವರು ಕರ್ನಾಟಕ ಸಂಗೀತ ಪದ್ಧತಿಯ ಎಲ್ಲ ಪ್ರಕಾರಗಳಲ್ಲೂ ನಿಷ್ಣಾತರು. ಹೆಸರಿಗೆ ತಕ್ಕ ವೇಣುಮಾಧುರ್ಯವನ್ನು ದೈವದತ್ತವಾಗಿ ಮೈಗೂಡಿಸಿಕೊಂಡಿರುವ ಇವರು, 'ಬಾರೋ ಕೃಷ್ಣಯ್ಯ, ಕೃಷ್ಣ ನೀ ಬೇಗನೆ ಬಾರೋ, ಆಡಿಸಿದಳೇಶೋಧ' ಮುಂತಾದ ಭಕ್ತಿಭಾವದ ಗೀತೆಗಳನ್ನು ನುಡಿಸಿದಾಗ ತಲೆದೂಗದ ರಸಿಕರೇ ಇಲ್ಲವೆನ್ನಬಹುದು. ಕೆಲವು ತಿಂಗಳ ಹಿಂದೆ ಅವರ ಆನ್ಲೈನ್ ಕಾರ್ಯಕ್ರಮವೊಂದರಲ್ಲಿ ಕಟ್ಟಿಕೊಟ್ಟ ಕಲ್ಯಾಣಿ ರಾಗದ 'ರಾಗ, ತಾನ, ಪಲ್ಲವಿ'ಯ ಸವಿಸ್ತಾರ ಪ್ರಸ್ತುತಿ, ನಮ್ಮೆಲ್ಲರಿಗೂ ಆ ರಾಗದ ಎಲ್ಲ ಸೂಕ್ಷಮತಿಸೂಕ್ಷ್ಮ ಆಯಾಮಗಳ  ದರ್ಶನ ಮಾಡಿಸಿತೆಂದರೆ, ಅತಿಶಯೋಕ್ತಿಯಲ್ಲ.  

ಕೆಲವು ವರ್ಷಗಳ ಹಿಂದೆ ಅವರು ಶತಾವಧಾನಿ ಗಣೇಶ್ ಹಾಗೂ ಗಮಕಿ ಶ್ರೀ ಚಂದ್ರಶೇಖರ ಕೆದಿಲಾಯ ರವರೊಂದಿಗೆ ನಡೆಸಿಕೊಟ್ಟ ಮಹಾಭಾರತದ 'ವಾದನ, ವಾಚನ, ವ್ಯಾಖ್ಯಾನ'ದ ಸುಮಾರು ೨೪೦ ಘಂಟೆಗಳ ವಿನೂತನ ಕಾರ್ಯಕ್ರಮ ಅವಿಸ್ಮರಣೀಯವಾದುದು. 

ಬಾಲ ಪ್ರತಿಭೆಗಳನ್ನು ಗುರುತಿಸಿ, ಅವರುಗಳನ್ನು ಕೈಹಿಡಿದು ಪೋಷಿಸಿ, ಬೆಳಸುವ ಹೃದಯವಂತ ಗುರುಗಳಾಗಿ ಶ್ರೀಯುತರು ಸೇವೆ ಸಲ್ಲಿಸುತ್ತಿರುವುದು, ಬೆಂಗಳೂರಿಗರ ಸುದೈವ ಎನ್ನಬಹುದು. ಈ ಮಹಾಗುರುಗಳ  'ಗೋಕುಲಂ ಸಂಗೀತ ಶಾಲೆ'ಯ ಹಲವು ಬಾಲ ಹಾಗು ತರುಣ ಶಿಷ್ಯಂದಿರುಗಳು ಈಗಾಗಲೇ ಹಲವು ಸಂಪೂರ್ಣ ಮಟ್ಟದ ಶಾಸ್ತ್ರೀಯ ಸಂಗೀತ ಕಚೇರಿಗಳನ್ನು ದೇಶ-ವಿದೇಶಗಳಲ್ಲಿ ನಡೆಸಿಕೊಟ್ಟಿರುವುದು ಸಂತೋಷದ ಸಂಗತಿ. 

ಕರ್ನಾಟಕದ ಬಾಲ  ಪ್ರತಿಭೆಯಾಗಿ ಗುರುತಿಸಲ್ಪಟ್ಟು, ಈಗ ಪ್ರೌಢ ವಿದುಷಿಯಾಗಿ  ಬೆಳೆದಿರುವ ಕುಮಾರಿ ವಾರಿಜ ಶ್ರೀ ವೇಣುಗೋಪಾಲ್, ಶ್ರೀಯುತರ ಸುಪುತ್ರಿ ಹಾಗು ಶಿಷ್ಯೆ. ಗಾಯಕಿಯಾಗಿ, ವೇಣುವಾದಕಿಯಾಗಿ ಹೆಸರುಗಳಿಸಿರುವ ಈಕೆ ಈಗಾಗಲೇ, ದೇಶ-ವಿದೇಶಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಪ್ರಯೋಗಶೀಲೆಯಾದ ಇವರು ದೇಶ-ವಿದೇಶಗಳ ಸಂಗೀತಗಾರರುಗಳೊಂದಿಗೆ ಸಮ್ಮಿಶ್ರಣದ ಸಂಗೀತವನ್ನು (ಫ್ಯೂಶನ್ ಮ್ಯೂಸಿಕ್)  ಸಂಯೋಜಿಸಿದ್ದಾರೆ. 

ಶ್ರೀ ವೇಣುಗೋಪಾಲರವರ ಗೋಕುಲಂ ಸಂಗೀತ ಶಾಲೆ ಪ್ರತಿವರ್ಷ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮವೇ 'ಕಲಾರ್ಣವ.' ದೇಶದ ಪ್ರಖ್ಯಾತ ಸಂಗೀತಗಾರರುಗಳಾದ ಶಂಕರ್ ಮಹಾದೇವನ್, ಹರಿಹರನ್, ಎಸ್.ಪಿ. ಬಾಲಸುಬ್ರಮಣ್ಯಂ ಮುಂತಾದವರುಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿರುವದು ಶ್ರೀಯುತರ ಸಂಘಟನಾ ಸಾಮರ್ಥ್ಯದ ಪ್ರತಿಫಲವೇ ಸರಿ. 

ಕವನೋತ್ಸವ - ೬

(ಗೋಪಾಲಕೃಷ್ಣ ಅಡಿಗರ ನೆನೆಯುತ್ತಾ......)

ಯಾರಿವರು?

***

ಕೃಷ್ಣರಾಜರ ಮುರಳಿ ಕರೆಯಿತೆ 

ದೂರ ತೀರಕೆ ನಿನ್ನನು?

ಸಪ್ತ ಸಾಗರದಾಚೆ ಹಾರಿ 

ಸೇರಿದೆಯಾ ಕರುನಾಡನು?


ಹೂವ ಹಾಸಿಗೆ ಹಸಿರು ಹೊದಿಕೆ 

ಮರರೆಂಬಗಳ ಚುಂಬನ 

'ಕೆಂಪು ತೋಟ'ದ ಬೇಲಿಯೊಳಗೆ 

ನಿರ್ಮಿಸಿದೆ ಸ್ವರ್ಗವೊಂದನ!


ಬಿಳಿಯ ಸೀರೆಯನುಟ್ಟು ಬಳುಕುವ  

ಜಲಕನ್ನಿಕೆಯರ ನರ್ತನ 

ಸೆಳೆವ ಬೃಂದಾವನವ ಕಟ್ಟಿ 

ಸಿಂಗರಿಸಿದೆ ಕಾವೇರಿ ಅಣೆಕಟ್ಟನ!


ಕರ್ಮಭೂಮಿಯಲೇ ಮಣ್ಣಾದ 

ಸಾರ್ಥಕವು ನಿನ್ನೀ ಜೀವನ 

ಹಸಿರು ಸಂದೇಶದ ನಿನ್ನ 

ನೆನೆಯುತಿದೆ ಕನ್ನಡ ವನ, ಮನ 

(ರಚನೆ: ಲಕ್ಷ್ಮೀನಾರಾಯಣ ಕೆ.)



ಕವನೋತ್ಸವ - ೭

ಯಾರಿವರು?

***

ಮಧುರ ಕಂಠದ ಪುಟ್ಟ ಕೋಗಿಲೆಗೆ 

ಕುತ್ತಾಯ್ತೆ ಕೊರಳ ನೋವೊಂದು?

ಗಡುಸಾಯ್ತು ಗಾನಗಂಗೆಯ ಸಿರಿಕಂಠವಂದು!


ಸೋಲೊಪ್ಪುವುದುಂಟೆ 

ಗಂಡುಮೆಟ್ಟಿನ ನಾಡ ದಿಟ್ಟ ಮಹಿಳೆ?

ಒಲಿಸಿಕೊಂಡಳಲ್ಲಾ ಗಡುಸು ದನಿಗೆ ಭಾವದ ಸೆಲೆ!


ಸಣ್ಣ ಝರಿಯೊಂದು ಬೆಟ್ಟಗುಡ್ಡಗಳ ಬಳಸಿ 

ಮೈತುಂಬಿ ಭೋರ್ಗರೆದು ನದಿಯಾಗುವಂತೀ 

ಗಂಗೆಯ ಗಾನಶ್ರುತಿ 


ಭೀಮ, ಬಸವ, ಮಲ್ಲಿಕಾರ್ಜುನರ ಸೆಣಸಿ 

ಗೆದ್ದು ಬೀಗಿದಳಲ್ಲಾ ಹೆಣ್ತನವ ಮೆರೆಸಿ 

ಪದ್ಮವಿಭೂಷಣೆಯಾಗಿ ಕರುನಾಡ ಗೆಲಿಸಿ 

(ರಚನೆ: ಲಕ್ಷ್ಮೀನಾರಾಯಣ ಕೆ.) 


ಕವನೋತ್ಸವ - ೮

ಯಾರಿವರು?

***

ಗೋಕಾಕದ ಜಲಧಾರ 

ಕರುನಾಡ ನಯಾಗರ 

ಅಲ್ಲಿ ಜನಿಸಿತೊಂದು 

ಗಣಿತದ ಧ್ರುವತಾರ 


ಬೆಳಗಿತದು  

ಗಂಡುಮೆಟ್ಟಿನ ನಾಡ  

ವಿದ್ಯಾಲಯಗಳ 

ಪರಿಕರ 


ದೂರದೈದು ನದಿಗಳ ಬೀಡ  

ಆಳಿದ್ದು ಅದರ ಶಿಖರ 

ಅದರ  ಸ್ಮರಣೆಯೆ 

ನಮಗೆ ಶ್ರೀಕಾರ 

(ರಚನೆ: ಲಕ್ಷ್ಮೀನಾರಾಯಣ ಕೆ.)


ಕವನೋತ್ಸವ - ೯

ಯಾರಿವರು?

***

ನಾನೆಂಬುದು ಅಹಂಕಾರ, ನೀನೆಂಬುದು ಔದಾರ್ಯ 

ನಾನು, ನೀನುಗಳ ಮಿಲನವೇ  'ಆನು'

'ನಾನು, ನೀನು, ಆನು'ಗಳ ನಿಯಂತ್ರಣವೇ 

'ತಾನು' ಎಂದವರಿವರು 


ತೋಳುಗಳ ತೋಳ ಬಂಧಿ  

ತುಟಿಗಿತ್ತ ಹಾಲು ಜೇನು 

ಹೊಟ್ಟೆಗಿತ್ತ ಜೀವ ಫಲವೇ 

ಸಾಕೆಂದವರಿವರು 


ಕೂಲಿ ಕಂಬಳಿಯ ಪಾಲಿನ 

ಮೈದೊಗಲಿಗೆ 

ಧೂಳಿನ ಭಂಡಾರ ಹಣೆ ಹತ್ತಿದರೂ 

ಕುರುಡು ಕಾಂಚಾಣ ಬೇಡವೆಂದವರಿವರು 

(ರಚನೆ: ಲಕ್ಷ್ಮೀನಾರಾಯಣ ಕೆ.) 




Mini Poetry Festidval - 1

Who is this?

***

Used to count, when a child

not money, but the count of letters and words

composed many rhythmic poems 

Did he become famous? Nobody knows


Did plenty of counting during youth

not the count of letters and words

 but the county of money

the task of guarding money

 where did he do? You all know it!

   

Does he belong to 'Simha Rashi?', nobody knows

but he joined an 'union of Lions,' boasted 'I'm Lion too'

travelled all over the world

Who met his bill, Nobody knows


Even after retirement

he hasn't given up his instincts

does so many 'online meetings'!

with whom, you don't know it all


He carries the name of Tirupati Lord

cautions others not to fall for 'namas'

but he himself, often sports 'Lords namas'

Can you tell who he is?

(Written by

Lakshminarayana K)

Notes:

1) 'nama' often is a kannada phrase

 for getting cheated

2) 'nama' more often refers to the holy mark 

on Tirupati Lord's forehead


ಕಿರು ಕವನೋತ್ಸವ - ೧

ಯಾರಿವರು?

***

ಬಾಲ್ಯದಲ್ಲೆ ಮಾಡುತಿದ್ದ ಲೆಕ್ಕಾಚಾರ 

ಹಣಕಾಸಿನದಲ್ಲ, ಗುರು-ಲಘುಗಳದು 

ರಚಿಸಿದ್ದ ಛಂದಬದ್ಧ ಕವನಗಳ 

ಕವಿಪುಂಗವನಾದನೋ? ಗೊತ್ತಿಲ್ಲ 


ಯವ್ವನದಲ್ಲೂ ಮಾಡಿದ ಲೆಕ್ಕಾಚಾರ 

ಗುರು-ಲಘುಗಳದಲ್ಲ, ಹಣಕಾಸಿನದು 

ಧನ ಕಾಯುವ ಕಾಯಕ ಎಲ್ಲಿ ಮಾಡಿದನೀವ?

ನಿಮಗೆಲ್ಲಾ ಗೊತ್ತಲ್ಲಾ!


ಸಿಂಹರಾಶಿಯವನಿವನೋ, ತಿಳಿದಿಲ್ಲ 

'ಸಿಂಹಗಳ ಕೂಟ'  ಸೇರಿ, ತಾನೂ ಸಿಂಹನೆಂದ 

ತಿರುಗಿಬಂದ ದೇಶ-ವಿದೇಶ

ಖರ್ಚು ಯಾರದೊ? ಗೊತ್ತಿಲ್ಲ 


ನಿವೃತ್ತಿಯಾದರು ಬಿಟ್ಟಿಲ್ಲ 

ಪ್ರವೃತ್ತಿಯ ಗೀಳ 

'ಆನ್ಲೈನ್ ಮೀಟಿಂಗ್' ಮಾಡುತ್ತಾನಲ್ಲ 

ಯಾರ್ಯಾರ ಜೊತೆಯೊ, ಎಲ್ಲ ತಿಳಿದಿಲ್ಲ 


ತಿರುಪತಿ ಹೆಸರಿವನಿವ 

'ನಾಮ' ಯಾರಿಗೂ ಹಾಕಿದ್ದಿಲ್ಲ 

ಆಗಾಗ ಹಾಕಿಕೊಳ್ಳುತ್ತಾನೆ 

ಅವನಿಗವನೇ ನಾಮ 

ಯಾರಿವನು? ಹೇಳಿ ನೀವೆಲ್ಲಾ

(ರಚನೆ: ಲಕ್ಷ್ಮೀನಾರಾಯಣ ಕೆ.)


೧) ಜಿ.ಆರ್. ವಿಶ್ವನಾಥ್ ಕ್ರಿಕೆಟ್ ಪಟು ಸುಧೀರ್ ಕುಲ್ಕರ್ಣಿ  ಸುಧೀಂದ್ರ ಕುಮಾರ್ 

೨) ಕೆ.ಎಸ್.ಅಶ್ವಥ್ ಚಿತ್ರನಟರು ಪದ್ಮ ಪ್ರೇಮಚಂದ್ರ ಕೃಷ್ಣಯ್ಯ 

೩) ಶಾಂತವೇರಿ ಗೋಪಾಲ ಗೌಡ  ರೈತ ಹೋರಾಟಗಾರರು  ಸುಧೀರ್ ಕುಲ್ಕರ್ಣಿ ಸುರೇಶ ಕೇಣಿ 

೪) ಬೆಂಗಳೂರು ನಾಗರತ್ನಮ್ಮ ಗಾಯಕಿ-ನರ್ತಕಿ  ಆರ್.ಕೆ. ಕೃಷ್ಣ ಅಯ್ಯಂಗಾರ್ ಪಾರ್ವತಿ ಮೋಕ್ಷಗುಂಡಂ 

೫) ಎಚ್. ಎಸ್. ವೇಣುಗೋಪಾಲ್ ವೇಣುವಾದನ ರಕ್ಷಾ ಮಹೇಂದ್ರ ನಾಗರಾಜ್ 

೬) ಜಿ.ಎಚ್. ಕ್ರುಮ್ಬಿಗಲ್ ತೋಟಗಾರಿಕೆ ನರಸಿಂಹ ಮೂರ್ತಿ ಎಲ್. ನಾಗರಾಜ ಜೋಯಿಸ್ 

೭) ಗಂಗೂಬಾಯಿ ಹಾನಗಲ್ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ  ಜಿ.ಎಸ್.ಟಿ.ಪ್ರಭು ಶ್ರೀಕಾಂತ್ ಕೆ.ಆರ್. 

೮) ಡಿ. ಸಿ. ಪಾವಟೆ ಶಿಕ್ಷಣ ತಜ್ಞ ನಾಗೇಂದ್ರ  ಎ. ವೆಂಕಟರಾಜು ಎಚ್. 

೯) ದ.ರಾ. ಬೇಂದ್ರೆ ವರಕವಿ ಅನ್ನಪೂರ್ಣ ವೆಂಕಟನಂಜಪ್ಪ ಪದ್ಮ ರೇಖಾ 



ಪ್ರಖ್ಯಾತರ ಹೆಸರು ಕ್ಷೇತ್ರ ವಿಜೇತರು ಕ್ರ. ಸಂ. 


(ಮೂಲ ಕವನ ಹಿಂದಿಯಲ್ಲಿ 

ಅಟಲ್ ಬಿಹಾರಿ ವಾಜಪೇಯೀ 

ಭಾವಾನುವಾದ 

ಲಕ್ಷ್ಮೀನಾರಾಯಣ ಕೆ.)

ಗಳ 










 








 

 

 






Tuesday 17 November 2020

 ಪ್ರಕಾಶ್ ಶೆಟ್ಟರ 

ವ್ಯಂಗ್ಯೋತ್ಸವ 

(ರಚನೆ: ಲಕ್ಷ್ಮೀನಾರಾಯಣ ಕೆ)

***

ಶೆಟ್ಟರ ಕುಂಚವು ಕುಣಿಯಿತು ಎಂದರೆ 

ಪುಟ್ಟಪ್ಪ, ಬೇಂದ್ರೆ, ಕಾರಂತರೆದ್ದೇಳುವರು 

ರಾಮಾಯಣ, ಗಂಗಾವತರಣ, ಮೂಕ್ಕಜ್ಜಿಯ ಕಥೆ ಹೇಳುವರು 


ಶೆಟ್ಟರ ಕುಂಚವು ಕುಣಿಯಿತು ಎಂದರೆ 

ರಾಜ್, ರಾಜು, ಬಾಲು ಕಣ್ಣಲಿ ಕುಣಿಯುವರು 

ಬಾಡಿದ  ಬೆಳ್ಳಿಯ ತೆರೆಗೆ ಹೊಸ ಮೆರಗೊಂದನು ನೀಡವರು 


ಶೆಟ್ಟರ ಕುಂಚವು ಕುಣಿಯಿತು ಎಂದರೆ 

ತ್ರಿವೇಣಿ, ಇಂದಿರೆ ಲೇಖನಿ ಹಿಡಿಯುವರು 

 ಕಾವೇರಿ, ಚಂದ್ರೆಯರ ತೆರೆಗಿಳಿಸಿ,  ಪುಟ್ಟಣ್ಣ ಹೆಣ್ತನ ಮೆರೆಯುವರು 


ಶೆಟ್ಟರ  ಕುಂಚವು ಕುಣಿಯಿತು ಎಂದರೆ 

ರಾಜರತ್ನಂ, ಬೀಚಿ ಗರಿಗೆದರುವರು 

ಮುದುಡಿದ ಮನಕೆ ಮುದ ನೀಡುತ ಹಾಸ್ಯದ ಹೊನಲ ಹರಿಸುವರು 


ಶೆಟ್ಟರ ಕುಂಚವು ಕುಣಿಯಿತು ಎಂದರೆ 

ಕೆಎಸ್ಸ್ ನರ ಶೃಂಗಾರ, ನಿಸಾರರ ಜೋಗ ಕಣ್ಸೆಳೆಯುವುದು 

ಡೀವೀಜಿಯ ಮಂಕುತಿಮ್ಮನ ತೇಜಸ್ವಿ ಬಂಡಾಯ ಬಡಿದೇಳಿಪುದು 



Sunday 15 November 2020

2. ಅಂತಿಮ ವಿದಾಯ

        ಅಂತಿಮ ವಿದಾಯ 


 
 

ತರುಣ ವೈದ್ಯರಾದ ಡಾ. ಕಿರಣ್ ರವರಂದು ಉದ್ವಿಗ್ನರಾಗಿದ್ದರು. ಸಮಯ ಸುಮಾರು ರಾತ್ರಿ ೯ ಗಂಟೆಯಾಗಿತ್ತು. ಶವವೊಂದನ್ನು ಹೊತ್ತ ಆಂಬುಲೆನ್ಸ್ ವಾಹನವೊಂದು ನಗರದ ದಕ್ಷಿಣ ಭಾಗದಲ್ಲಿದ್ದ ಸ್ಮಶಾನದ ಕಡೆ ಸಾಗಿತ್ತು. ಶವದ ಜೊತೆಗೆ ಡಾ.ಕಿರಣ್ ರವರು ಕುಳಿತಿದ್ದರು.  ಸ್ಮಶಾನದ ಪರಿಸ್ಥಿತಿಯ ಪೂರ್ವಾಪರಗಳ ಸಮೀಕ್ಷೆಗೆಂದೇ ಮುಂಚೆಯೇ ತೆರಳಿದ್ದ ಆಸ್ಪತ್ರೆ ಸಿಬ್ಬಂದಿ ಸತೀಶರಿಂದ, ಡಾ.ಕಿರಣ್ ರವರಿಗೆ ಫೋನ್ ಕರೆಯೊಂದು ಬಂದಿತ್ತು. 'ಸ್ಮಶಾನದ ಬಳಿ ದೊಣ್ಣೆ, ಮಚ್ಚುಗಳನ್ನು ಹಿಡಿದ ನೂರಾರು  ಜನಗಳು ನೆರೆದಿದ್ದಾರೆ.  ಉದ್ರಿಕ್ತರಾದಂತೆ ಕಾಣುತ್ತಿರುವ ಅವರುಗಳು ಹೊಡಿ-ಬಡಿಯಲು ಸಿದ್ಧರಾದಂತಿದೆ. ನಾವು ತರುತ್ತಿರುವ ಶವದ ಅಂತ್ಯಕ್ರಿಯೆಯನ್ನು ಶತಾಯಗತಾಯ ತಡೆಯುವುದೇ ಅವರ ಉದ್ದೇಶದಂತಿದೆ' ಎಂಬುದಾಗಿ ತಿಳಿಸಿದ ಸತೀಶರ ದನಿಯಲ್ಲಿ ಆತಂಕವಿತ್ತು. ದೂರದಿಂದಲೇ ಸ್ಮಶಾನದ ಕಡೆ ಕಣ್ಣು ಹಾಯಿಸಿದ ಚಾಲಕ ದೇವೀಂದರ್ ರವರು ಕೂಡ ಡಾ.ಕಿರಣರವರನ್ನು ನೋಡುತ್ತಾ, ಏನೂ ಮಾಡಲು ಸಾಧ್ಯವಿಲ್ಲವೆನ್ನುವಂತೆ ತಲೆಯಾಡಿಸಿದರು. ಡಾ. ಕಿರಣ್ ರವರೀಗ ಗಾಬರಿಗೊಂಡಂತೆ ಕಂಡರು. 

ಸ್ಮಶಾನದ ಬಳಿ ನೆರೆದ ಜನರುಗಳೆಲ್ಲರೂ ಸ್ಥಳೀಯರೇ ಆಗಿದ್ದರು. ಕೋವಿಡ್ನಿಂದ ಮೃತಪಟ್ಟವರೊಬ್ಬರ ಶವವನ್ನು ಮಣ್ಣು ಮಾಡಲು ತಮ್ಮ ಸ್ಮಶಾನದ ಕಡೆ ಕರೆತರಲಾಗುತ್ತಿದೆ ಎಂಬ ಸುದ್ದಿ ಅವರುಗಳಿಗೆ ಹೇಗೋ ತಲುಪಿತ್ತು. ಕೋವಿಡ್ನಿಂದ ಸತ್ತ ವ್ಯಕ್ತಿಯ ಸಮಾಧಿಯಿಂದ ತಮ್ಮಗಳಿಗೂ ಕೋವಿಡ್ ಹರಡುವುದು ಖಚಿತವೆಂದು ನಂಬಿದ್ದ ಅವರುಗಳು, ಶವ ಸಂಸ್ಕಾರವನ್ನು ತಡೆಯಲು ಸನ್ನದ್ಧರಾಗಿದ್ದರು. ತಡ ರಾತ್ರಿಯಾದರೂ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತ್ತು. ನೂರಾರು ಜನ ಶಸ್ತ್ರಧಾರಿಗಳು  ನೋಡು ನೋಡುತ್ತಲೇ ಜಮಾಯಿಸಿದ್ದರು. ಮಣ್ಣು ಮಾಡಲು ತರುತ್ತಿರುವ ಶವ ನಗರದ ಖ್ಯಾತ  ವೈದ್ಯೆ ಡಾ. ಸುಲೋಚನಾ ಸಿಂಗ್ ರವರದ್ದು ಎಂಬುದನ್ನೂ ಲೆಕ್ಕಿಸದ ಅವರುಗಳು ಹಿಂಸಾಚಾರಕ್ಕೆ ಕಾಲು ಕೆರೆದು ನಿಂತಿದ್ದಂತ್ತಿತ್ತು.   

ಅಪಾಯದ ಮುನ್ಸೂಚನೆಯನ್ನರಿತ ಚಾಲಕರು ತಮ್ಮ ಆಂಬುಲೆನ್ಸ್ ವಾಹನವನ್ನು ಸುಮಾರು ೪ ಕಿ.ಮೀ. ದೂರವಿರುವ ಮತ್ತೊಂದು ಸ್ಮಶಾನಕ್ಕೆ ಕರೆದೊಯ್ದಿದ್ದರು. ಬೇಗನೆ ಗುಂಡಿಯೊಂದನ್ನು ಅಲ್ಲಿ ತೋಡಲು, ಜೆಸಿಬಿ ಮೇಷಿನ್ನೊಂದನ್ನು  ಕೂಡ ತರಿಸಲಾಗಿತ್ತು.  ಅದು ೧೨ ಅಡಿ ಆಳದ ಗುಂಡಿಯೊಂದನ್ನು ರಾತ್ರಿ ೧೧. ೩೦ರ ವೇಳೆಗೆ ತೆಗೆದು ಮುಗಿಸಾಗಿತ್ತು.  ನಾಲ್ಕು ವೈದ್ಯರುಗಳು, ಒಬ್ಬ ಮಹಿಳಾ ನರ್ಸ್ ಮತ್ತು ಒಂದೆರಡು ಶುದ್ಧೀಕರಣದ ಸಿಬ್ಬಂದಿಗಳನೊಳಗೊಂಡ ತಂಡವೊಂದೂ ಅಲ್ಲಿಗೆ ಬಂದು ಸಿದ್ಧವಾಗಿ ನಿಂತಿತ್ತು. ಎಲ್ಲಾ ವಿಧಿವಿಧಾನಗಳನ್ನು ಮುಗಿಸಿ, ಶವವನ್ನು ಗುಂಡಿಯೊಳಗೆ ಇಳಿಸಿಯೂ ಆಗಿತ್ತು. ಇದ್ದಕಿದ್ದಂತೆ ದೊಣ್ಣೆ, ಮಚ್ಚುಗಳನ್ನು ಹಿಡಿದ ೬೦-೭೦ ಪುಂಡರ ಗುಂಪೊಂದು ಪ್ರತ್ಯಕ್ಷವಾಗಿ, ದಿಢೀರನೆ ಎಲ್ಲರನ್ನೂ ಹೊಡಿ-ಬಡಿಯಲಾರಂಭಿಸಿತು. ಆ ಕ್ರೂರಿಗಳು ಎಸೆದ ಕಲ್ಲು, ಇಟ್ಟಿಗೆಗಳಿಂದ ಡಾ. ಕಿರಣ್ ಮತ್ತು ಅವರ ಸಹಚರರು ತೀವ್ರವಾಗಿ ಗಾಯಗೊಂಡರು.  ಆಕ್ರಮಣಕಾರಿಗಳ ಗುಂಪಿನಲ್ಲಿದ್ದ ಒಂದಿಬ್ಬರು ಕಿಡಿಗೇಡಿಗಳನ್ನು ಡಾ. ಕಿರಣ್ ಗುರುತಿಸಿ, ಹೊಡಿ-ಬಡಿಯುವುದನ್ನು ನಿಲ್ಲಿಸುವಂತೆ ವಿನಂತಿಸಿಕೊಂಡರೂ, ನಿರ್ದಯಿಗಳಾದ ಅವರು ಕರುಣೆ ತೋರದಾದರು.  ನಿಷ್ಕರುಣಿಗಳಾದ ಅವರು ಮಹಿಳಾ ನರ್ಸ್ ರವರನ್ನು ಕೂಡ ಲೆಕ್ಕಿಸದೆ ಥಳಿಸಿದರು. ನೋಡು ನೋಡುತ್ತಿದ್ದಂತೆ, ಚಾಲಕ ದೇವಿಂದರ್ ಹಾಗು ಸಹಾಯಕ ಸತೀಶ್ ರವರಗಳು ತಲೆ- ಪೆಟ್ಟಿನಿಂದ ರಕ್ತಸ್ರಾವಗೊಂಡು ನೆಲಕ್ಕುರುಳಿದರು. ಶವದ ಪೆಟ್ಟಿಗೆಯನ್ನೂ ಬಿಡದ ಅವರುಗಳು ಕಲ್ಲುಗಳಿಂದ ಅದನ್ನೂ ಚಚ್ಚಿಟ್ಟರು. ಬೇರೆ ಮಾರ್ಗ ತೋಚದೆ, ಡಾ. ಕಿರಣ್ ಮತ್ತವರ ಉಳಿದ ಸಂಗಡಿಗರು ಹೇಗೋ ಶವವನ್ನು ಮೇಲೆತ್ತಿ ಪೆಟ್ಟಿಗೆಯೊಳಗೆ ಸೇರಿಸಿ, ತಮ್ಮ ವಾಹನದೊಳಗೆ ತಳ್ಳಿದರು. ಚಾಲಕ ದೇವೀಂದರ್ ರವರು ಪ್ರಜ್ಞಾಹೀನರಾಗಿದ್ದರಿಂದ, ಡಾ. ಕಿರಣ್ ರವರೆ ವಾಹನವನ್ನು ನಡೆಸಬೇಕಾಯ್ತು. ತೀವ್ರವಾಗಿ ಗಾಯಗೊಂಡ ಸತೀಶ ಮತ್ತು ದೇವೀಂದರ್ ರವರುಗಳನ್ನು ಮೊದಲು ಹತ್ತಿರದ ಆಸ್ಪತ್ರೆಯೊಂದಕ್ಕೆ ಸೇರಿಸಲಾಯ್ತು. ವಾಹನದೊಳಗೀಗ ಡಾ. ಕಿರಣ್ ಏಕಾಂಗಿಯಾಗಿ ಬಿಟ್ಟಿದ್ದರು. 

ಶವ ಹೊತ್ತ ವಾಹನದೊಂದಿಗೆ ಡಾ. ಕಿರಣ್ ಸಮೀಪದ ಪೊಲೀಸ್ ಠಾಣೆಯೊಂದನ್ನು ಸೇರಿದರು.  ವಿವರ ತಿಳಿದ ಪೊಲೀಸ್ ಅಧಿಕಾರಿ, ಅವಶ್ಯಕ ಸಿಬ್ಬಂದಿಗಳ ತಂಡವನ್ನು ಕೂಡಲೇ ಕರೆಸಿದರು.  'ನಗರದಿಂದ ದೂರವಿರುವ ಬೇರೊಂದು ಕಡೆಗೆ ಹೋಗೋಣ'ವೆಂಬ ಪೊಲೀಸರ ಸಲಹೆಯಂತೆ ಶವದ              ವಾಹನವನ್ನೀಗ  ಡಾ. ಕಿರಣ್, ಮೂರನೇ ಸ್ಮಶಾನದ ಕಡೆಗೆ ಚಲಾಯಿಸಿದರು. ಜೆಸಿಬಿ ಮೇಷಿನ್ ಕೂಡ ಶವದ ವಾಹನವನ್ನು ಹಿಂಬಾಲಿಸಿತು. ದೂರದ ಸ್ಮಶಾನ ತಲುಪಿ, ೧೨ ಅಡಿ ಆಳದ ಗುಂಡಿಯೊಂದನ್ನು ತೊಡುವ ಹೊತ್ತಿಗೆ ಸಮಯ ನಡುರಾತ್ರಿಯ ೨ ಗಂಟೆಯಾಗಿತ್ತು.  ಪೊಲೀಸರ ರಕ್ಷಣೆ ಇದ್ದರೂ, ಡಾ. ಕಿರಣ್ ಮತ್ತವರ ಸಂಗಡಿಗರು ಭಯಭೀತರಾಗಿದ್ದರು. ಪುಂಡರುಗಳ ತಂಡ ಯಾವಾಗ ಬಂದು  ಮೇಲೆರಗುತ್ತದೆಯೋ ಎಂಬ ಆತಂಕ ಎಲ್ಲರಲ್ಲೂ ಇತ್ತು. ಶವವನ್ನು ಬೇಗ ಬೇಗ ಗುಂಡಿಯಲ್ಲಿಳಿಸಿ ಮಣ್ಣು ಮುಚ್ಚುವ ಕೆಲಸವನ್ನು ಮುಗಿಸಲಾಯಿತು. ಶವ ಸಂಸ್ಕಾರ ಮುಗಿದಿದ್ದರೂ ಡಾ. ಕಿರಣ್ ಮಾತ್ರ ಮ್ಲಾನಚಿತ್ತರಾಗಿದ್ದು ಸುಳ್ಳಲ್ಲ.  

ಕೋವಿಡ್ನಿಂದ ಮೃತಪಟ್ಟ ಹಿರಿಯ ವೈದ್ಯೆ ಡಾ. ಸುಲೋಚನಾ ಸಿಂಗ್ ರವರ ಬಲಗೈ ಬಂಟನಾಗಿ ದುಡಿಯುತ್ತಿದ್ದವರು, ತರುಣ ವೈದ್ಯ ಡಾ. ಕಿರಣ್. ಅವಿವಾಹಿತೆಯಾದ ಡಾ. ಸುಲೋಚನಾರವರಿಗೆ ಡಾ. ಕಿರಣ್ ಸಾಕುಮಗನಂತಾಗಿ ಹೋಗಿದ್ದರು. ೫೭ರ ಹರೆಯದಲ್ಲೇ ಅಕಾಲಿಕ ಮರಣ ಹೊಂದಿದ  ಹಿರಿಯ ಜೀವಕ್ಕೆ ಗೌರವೋಚಿತ ಅಂತಿಮ ವಿದಾಯವನ್ನು ನೀಡಲಾಗದ ದುರ್ದೈವ ಇಂದು ಡಾ. ಕಿರಣ್ ರವರದ್ದಾಗಿತ್ತು.  ಜನಪ್ರಿಯ ವೈದ್ಯೆ ಡಾ. ಸುಲೋಚನಾರವರ ಕೋವಿಡ್ ಸಾವು ಅವರ ಸಮೀಪವರ್ತಿಗಳನ್ನೆಲ್ಲಾ ಶೋಕಸಾಗರದಲ್ಲಿ ಮುಳುಗಿಸಿತ್ತು. ಬಡ ಗ್ರಾಮೀಣ ಕುಟುಂಬವೊಂದರಲ್ಲಿ ಜನಿಸಿದ ಡಾ. ಸುಲೋಚನಾರವರನ್ನು, ಸುಮಾರು ಮೂರು ದಶಕಗಳ ಹಿಂದೆ 'ಲೂನಾ ಡಾಕ್ಟರ್' ಎಂದೇ ಹಳ್ಳಿಗರು ಕರೆಯುತ್ತಿದ್ದರು. ಆ ದಿನಗಳಲ್ಲಿ ಬಡವರ ದ್ವಿಚಕ್ರ ವಾಹನವಾಗಿದ್ದ 'ಲೂನಾ'ವೇರಿ ದುರ್ಗಮ ಹಳ್ಳಿ-ಹಳ್ಳಿಗಳನ್ನು ತಲುಪಿ, ಬಡ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಡಾ. ಸುಲೋಚನಾರವರಿಗೆ, ತಮ್ಮದೇ ಆದ 'ಕ್ಲಿನಿಕ್'ವೊಂದು ಇರಲೇ ಇಲ್ಲ.  ಸರ್ಕಾರೀ ಆಸ್ಪತ್ರೆಗಳಿಂದ ದೂರವಿರುವ ಹಳ್ಳಿಗಳನ್ನು ಗುರುತಿಸಿ, ಆ ಹಳ್ಳಿಗಳನ್ನು ದಿನ ಬಿಟ್ಟು ದಿನ ತನ್ನ ವಾಹನವೇರಿ ತಲುಪುತ್ತಿದ್ದ ಆಕೆಗೆ, ಹಳ್ಳಿಯ ಮರಗಳ ನೆರಳ ತಾಣವೇ 'ಕ್ಲಿನಿಕ್' ಆಗಿ ಹೋಗಿತ್ತು.  ಮಳೆ ದಿನಗಳಲ್ಲಿ,  ಹಳ್ಳಿಯ ದೇವಸ್ಥಾನದ ಆವರಣವೋ ಅಥವಾ ದಯಾವಂತ ಹಳ್ಳಿಗರ ಮನೆಯ ಜಗುಲಿಯೋ ಸುಲೋಚನಾರ ಚಿಕಿತ್ಸಾಸ್ಥಾನವಾಗಿ ಹೋಗುತ್ತಿತ್ತು. ರೋಗಿಗಳ ಪರೀಕ್ಷೆ ಮಾಡಲು ಬೇಕಾದ ಮಂಚ-ಕುರ್ಚಿಗಳನ್ನು ಗ್ರಾಮೀಣರೇ ಒದಗಿಸುವ ಪರಿಪಾಠವೂ ಇತ್ತು. ದಿನ ಬೆಳಗಾಗುವುದರೊಳಗೆ  ಸುತ್ತಲಿನ ನಾಲ್ಕಾರು ಹಳ್ಳಿಗಳ ರೋಗಿಗಳು ತಮ್ಮ ಎತ್ತಿನಗಾಡಿಗಳನ್ನೇರಿ ಬಂದು  ಡಾ. ಸುಲೋಚನಾರವರ ಪೂರ್ವನಿಯೋಜಿತ ಹಳ್ಳಿಯನ್ನು ತಲುಪುತ್ತಿದ್ದರು. ಆಕೆ ಬಂದ ಕೂಡಲೇ ನೆರೆದ ಹಳ್ಳಿಗರೆಲ್ಲರೂ ಎದ್ದುನಿಂತು 'ನಮಸ್ತೆ ಡಾಕ್ಟರಮ್ಮಾ' ಎಂದು ಒಕ್ಕೊರಳಿನಲ್ಲಿ ಹೇಳಿ ಗೌರವ-ಪ್ರೀತಿಗಳನ್ನು ತೋರ್ಪಡಿಸುತ್ತಿದ್ದರು. ಅಷ್ಟೇ ವಿನಮ್ರತೆಯಿಂದ ಡಾ. ಸುಲೋಚನಾರವರು ಕೂಡ ಎಲ್ಲಾ ರೋಗಿಗಳನ್ನು ತನ್ಮಯರಾಗಿ ಪರೀಕ್ಷಿಸಿ, ಬೇಕಾದ ಚಿಕಿತ್ಸೆಗಳನ್ನು ನೀಡುತ್ತಿದ್ದರು. ಹಳ್ಳಿಗರ ಕಷ್ಟಗಳನ್ನರಿತ ಸುಲೋಚನಾರವರು ರೋಗಿಗಳಿಗೆ ಬೇಕಾಗುವ ಔಷಧಗಳ 'ಕಿಟ್' ಒಂದನ್ನು ತಾವೇ ಹೊತ್ತು ತರುತ್ತಿದ್ದರು. ಎಲ್ಲರ ನೆಚ್ಚಿನ ವೈದ್ಯೆಯಾದ ಅವರು, ಯಾವ ರೋಗಿಯಿಂದಲೂ, 'ಇಷ್ಟು-ಅಷ್ಟು' ಎಂದು ಹಣವನ್ನು ಕೇಳುತ್ತಿರಲಿಲ್ಲ. ಹೆಚ್ಚಿನ ರೋಗಿಗಳು ಸ್ವಪ್ರೇರಿತರಾಗಿ ರೂ. ೨ ನೀಡುವುದು ವಾಡಿಕೆಯಾಗಿ ಹೋಗಿತ್ತು. ಇಂಜೆಕ್ಷನ್ ಚಿಕಿತ್ಸೆಯನ್ನು ಪಡೆದ ರೋಗಿಗಳು ರೂ. ೪ ನೀಡಿದ್ದೇ ಹೆಚ್ಚೆನಿಸಿತ್ತು. ಇದೆಲ್ಲಕ್ಕಿಂತ ಮಿಗಿಲಾಗಿ, 'ಮೇಡಂ "ಕೈಗುಣ"ಕ್ಕೆ ಯಾವುದೇ ರೋಗವನ್ನು ಹುಷಾರು ಮಾಡಬಲ್ಲ ಶಕ್ತಿಯಿದೆ'ಯೆಂಬುದು ಗ್ರಾಮೀಣರ ವಿಶ್ವಾಸವಾಗಿತ್ತು. 

೧೦ನೇ ತರಗತಿಯ ಪರೀಕ್ಷೆ ಎಂಬುದು  ಗ್ರಾಮೀಣ ವಿದ್ಯಾರ್ಥಿಗಳ ನಿರ್ಣಾಯಕ ಹಂತ. ಆ ಮಕ್ಕಳ  ಕಷ್ಟವನ್ನರಿತ  ಡಾ. ಸುಲೋಚನಾರವರು, ಪರೀಕ್ಷೆಗೆ  ಎರಡು ತಿಂಗುಳುಗಳ ಮುಂಚೆಯೇ  ತಾವಾಗೇ 'ಪಾಠದ ಮೇಡಂ' ಆಗುತ್ತಿದ್ದರು. ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ವಿಷಯಗಳನ್ನು ಸ್ಥಳೀಯ ಭಾಷೆಯಲ್ಲಿ ಭೋಧಿಸುವುದರಲ್ಲಿ ಸಿದ್ಧಹಸ್ತೆಯಾದ ಮೇಡಂ ತರಗತಿಗಳು ತುಂಬಿಹೋಗಿರುತ್ತಿದ್ದವು. ಸುಲೋಚನಾರವರ ಮಾರ್ಗದರ್ಶನದಿಂದಲೇ ಪ್ರತಿವರ್ಷ ೧೦ನೇ ತರಗತಿಯ ಫಲಿತಾಂಶ ಚೆನ್ನಾಗಿ ಬರುತ್ತಿದೆ ಎಂಬುದು ಆ ಹಳ್ಳಿಗರ ಧೃಡ ನಂಬಿಕೆಯಾಗಿ ಹೋಗಿತ್ತು.  ಆ ಎಲ್ಲಾ ಹಳ್ಳಿಗರ ಪಾಲಿಗೆ ಸ್ನೇಹಿತೆಯೂ, ಮಾರ್ಗದರ್ಶಕಿಯೂ ಆಗಿಹೋಗಿದ್ದ ಡಾ. ಸುಲೋಚನಾರವರು, ರೈತರಿಗೆ ಕೃಷಿ ಸಲಹೆಗಳನ್ನೂ ನೀಡುತ್ತಿದ್ದರು. ರೈತರ ಮಗಳಾದ ಆಕೆಗೆ ಮಳೆ-ಬೆಳೆ-ಬಿತ್ತನೆ-ಗೊಬ್ಬರ ಮುಂತಾದ ವಿಷಯಗಳು ಚೆನ್ನಾಗಿಯೇ ತಿಳಿದಿತ್ತು.  

ಕಡಿಮೆ ವೆಚ್ಚದಲ್ಲಿ, ಎಲ್ಲ ರೋಗಗಳಿಗೂ ಸಮರ್ಪಕ ಚಿಕಿತ್ಸೆ ನೀಡಬಲ್ಲ ಆಸ್ಪತ್ರೆಯೊಂದನ್ನು ತಮ್ಮ ನಗರದಲ್ಲಿ ಸ್ಥಾಪಿಸಬೇಕೆಂಬುದೇ ಡಾ. ಸುಲೋಚನಾ ಸಿಂಗ್ ರವರ ಅಭಿಲಾಷೆಯಾಗಿತ್ತು. ಸುಮಾರು ಎರಡು ದಶಕಗಳ ಹಿಂದೆ 'ಸೇವಾ ಆಸ್ಪತ್ರೆ'ಯ ಆರಂಭದೊಂದಿಗೆ ಅವರ ಆಶಯ ಈಡೇರಿತ್ತು. ಚಿಕಿತ್ಸೆಯನ್ನರಸಿ ಬರುವ ಬಡ ರೋಗಿಗಳಿಗೆ ಕನಿಷ್ಠ ವೆಚ್ಚದ  ವಿಶೇಷ ವ್ಯವಸ್ಥೆ 'ಮೇಡಂ ಆಸ್ಪತ್ರೆ'ಯಲ್ಲಿ  ಸದಾ ಲಭ್ಯವಿರುತ್ತಿತ್ತು. ಹೆಚ್ಚಿನ ಹಣ ನೀಡಬಲ್ಲ ಧನಿಕ ರೋಗಿಗಳಿಂದ ಹೆಚ್ಚು ಶುಲ್ಕವನ್ನು ವಸೂಲಿ ಮಾಡಿ ಆಸ್ಪತ್ರೆ  ಖರ್ಚು-ವೆಚ್ಚವನ್ನು ನಿಭಾಯಿಸುವಲ್ಲಿ ಡಾ. ಸುಲೋಚನಾರಿಗೆ ಸಾಕು-ಸಾಕಾಗಿ ಹೋಗುತ್ತಿತ್ತು. ಹಾಗಾಗಿ ಇತ್ತೀಚೆಗೆ ಹಣಕಾಸಿನ ಪೂರ್ಣ ಭಾರವನ್ನು ಅವರು ಡಾ. ಕಿರಣ್ ರವರಿಗೆ ವಹಿಸಿಬಿಟ್ಟಿದ್ದರು. ಏನೇ ಆಗಲಿ, ನೀಡಲು ಹಣವಿಲ್ಲವೆಂಬ ಕಾರಣಕ್ಕೆ, ಬಡ ರೋಗಿಗಳಿಗೆ ಮೇಡಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸುವುದಿಲ್ಲ ಎಂಬುದು ಜನಸಾಮಾನ್ಯರ ವಿಶ್ವಾಸವಾಗಿಬಿಟ್ಟಿತ್ತು. ಸಾವಿನ ಮನೆಯ ಕದ ತಟ್ಟಿಬಂದ ಎಷ್ಟೋ ರೋಗಿಗಳಿಗೆ                                 ಡಾ. ಸುಲೋಚನಾರವರ ಆಸ್ಪತೆಯಲ್ಲಿ ಮರುಜೀವ ದೊರಕಿಸಿದ ಘಟನೆಗಳು ನಗರದಲ್ಲಿ ಮನೆಮಾತಾಗಿದ್ದವು. ಹಾಗಾಗಿ ಡಾ. ಸುಲೋಚನಾ ಬಡವರ ಪಾಲಿನ 'ದೇವಿ'ಯಾಗಿ ಹೋಗಿದ್ದರು. 

ಆದರೆ ಕಳೆದ ೨೦೨೦ರ ಮಾರ್ಚ್ ತಿಂಗಳಿಂದ ಡಾ. ಸುಲೋಚನಾರವರು ಹೊಸ ಸವಾಲೊಂದನ್ನು ಎದುರಿಸುತ್ತಿದ್ದರು. ಜೀವ ಹಿಂಡುವ ಕೋವಿಡ್-೧೯ರ ಹಾವಳಿ ಅವರ ನಗರದಲ್ಲಿ ತುಸು ಹೆಚ್ಚಾಗಿಯೇ ಇತ್ತು.  ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ರೋಗಿಗಳನ್ನು ನಿಭಾಯಿಸಲಾಗದ ಸರಕಾರ, ನಗರದ    ಡಾ. ಸುಲೋಚನಾರವರ  'ಸೇವಾ ಆಸ್ಪತ್ರೆ'ಯನ್ನೂ ಕೋವಿಡ್ ಚಿಕಿತ್ಸೆಗೆಂದು ಆಯ್ಕೆ ಮಾಡಿಕೊಂಡಿತ್ತು.  ಕೋವಿಡ್ ರೋಗಕ್ಕೆ ಸಂಬಂಧಪಟ್ಟಂತಹ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು, ಸರಕಾರ ನಿಗದಿಪಡಿಸಿರುವ ವೆಚ್ಚದ ಮಿತಿಯೊಳಗೆ ನೀಡುವ ವ್ಯವಸ್ಥೆ ಮೇಡಂ ಆಸ್ಪತ್ರೆಯಲ್ಲಿ ಮಾಡಲಾಗಿತ್ತು.  ಕೋವಿಡೇತರ ರೋಗಿಗಳ ಸಂಖ್ಯೆ ತಗ್ಗಿದ್ದರಿಂದ ಆಗುತ್ತಿರುವ ಆದಾಯದ ಖೋತವನ್ನು ಲೆಕ್ಕಿಸದೆ ಮೇಡಂ ಬಡ ಕೋವಿಡ್ ರೋಗಿಗಳ ಉಚಿತ ಚಿಕಿತ್ಸೆಯನ್ನು ಮುಂದುವರೆಸಿದ್ದರು. ಆಸ್ಪತ್ರೆಯ ಮುಖ್ಯಸ್ಥೆಯಾದರೂ, ತಮ್ಮ ಆಸ್ಪತ್ರೆಯ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಡಾ. ಸುಲೋಚನಾ ಹಿಂದುಳಿದಿರಲಿಲ್ಲ. ಅವರ ಕಾರ್ಯವೈಖರಿ ಮಿಕ್ಕೆಲ್ಲಾ ಕೊರೋನಾ ಕಾರ್ಯಕರ್ತರುಗಳಿಗೆ ಮಾದರಿಯಾಗಿತ್ತು. ದುರ್ದೈವವೋ, ಏನೋ ಎಂಬಂತೆ ಕೆಲವು ವಾರಗಳನಂತರ ಡಾ. ಸುಲೋಚನಾರವರಿಗೇ, ಹೆಮ್ಮಾರಿ ಕೊರೋನಾ ವಕ್ಕರಿಸಿತ್ತು. ಕೂಡಲೇ ಚಿಕೆತ್ಸೆಗೆ ಒಳಪಟ್ಟ ಅವರನ್ನು ದಿಗ್ಬಂಧನದಲ್ಲಿರಿಸಲಾಗಿತ್ತು. ದಿನೇ ದಿನೇ ಹದಕೆಟ್ಟ ಆಕೆಗೆ ಉಸಿರಾಟದ ಸಮಸ್ಯೆ ಉಂಟಾದಾಗ, ಬೇರೆ ಮಾರ್ಗವಿಲ್ಲದೆ ಡಾ.ಕಿರಣ್, ಅವರಿಗೆ  'ವೆಂಟಿಲೇಟರ್' ಅಳವಡಿಸಬೇಕಾಯಿತು. 'ಎಂತಹ ವಿಷಮ ಪರಿಸ್ಥಿತಿಯಲ್ಲೂ ಧೈರ್ಯದಿಂದಿರಿ' ಎಂದು ತಮ್ಮ ರೋಗಿಗಳಿಗೆ ತಿಳಿಹೇಳುತ್ತಿದ್ದ ಡಾ. ಸುಲೋಚನಾ, ಸ್ವತಃ ಧೈರ್ಯದಿಂದಿರುವಂತೆ ಕಂಡರೂ, ಮಾರಕ ಕೋವಿಡ್ ಒಳಗಿನಿಂದಲೇ ಅವರನ್ನು ಸ್ವಲ್ಪ-ಸ್ವಲ್ಪವಾಗಿ ಕೊಲ್ಲುತ್ತಿತ್ತು. ಅಧೀರರಾದಂತೆ ಕಂಡ ಡಾ. ಕಿರಣ್ ರವರು ದೇವರಿಗೂ ಹರಕೆ ಹೊತ್ತಿದ್ದೂ ಆಯಿತು.  ಜೀವಾನಿಲದ ಕೊರತೆ ತೀವ್ರವಾದ ಒಂದು ದಿನ, ಮಾರಿ ಕೋವಿಡ್ ಡಾ. ಸುಲೋಚನಾರ ಜೀವವನ್ನು ಹಿಂಡಿ ಹಿಂಡೇ ಕೊಂಡೊಯ್ದಿತ್ತು.  'ಕೆಲವೊಮ್ಮೆ ದೇವರಿಗೂ ಡಾ. ಸುಲೋಚನಾರವರಂಥ ಸೇವಾತತ್ಪರರ ಅವಶ್ಯಕತೆ ಉಂಟಾಗುತ್ತೋ ಏನೋ? ಅಂಥವರುಗಳ ಜೀವವನ್ನು ಕೊಂಡೊಯ್ಯುವಲ್ಲಿ ದೈವ ಹಿಂದೆ ಮುಂದೆ ನೋಡದೇಕೆ?' ಎಂಬ ಪ್ರಶ್ನೆ ಡಾ. ಕಿರಣ್ ರವರನ್ನು ಮತ್ತೆ ಮತ್ತೆ ಕಾಡಿತ್ತು. 

ಡಾ. ಸುಲೋಚನಾರವರೊಂದಿಗಿನ ತಮ್ಮ ಅವಿನಾಭಾವ ಸಂಬಂಧದ ಅಲೆಗಳನ್ನು ಡಾ. ಕಿರಣ್ ಮೆಲಕು ಹಾಕುತ್ತಿದ್ದರು. 'ಸಾವು ಜೀವವನ್ನು ಅಂತ್ಯಗೊಳಿಸಬಹುದು, ಸಂಬಂಧಗಳನ್ನಲ್ಲ,' ಎಂಬ ಮೇಡಂ ಮಾತುಗಳು ಕಿರಣ್ ರವರ ಕಿವಿಯಲ್ಲಿ ರಿಂಗಣಿಸುತ್ತಿತ್ತು. 'ಸುಲೋಚನಾರವರಂಥ ಸಾತ್ವಿಕ ಜೀವಿಯನ್ನೂ ನಿಷ್ಕರುಣಿ ಸಾವು  ಲೆಕ್ಕಿಸದಾಯಿತೇಕೆ?' ಎಂಬ ಪ್ರಲಾಪ ಕಿರಣ್ ರದ್ದಾಗಿತ್ತು.  ಅವರದೇ ಎಂಬ ಕುಟುಂಬವಿರದ ಡಾ. ಸುಲೋಚನಾರವರ ಅಂತಿಮ ಸಂಸ್ಕಾರದ ದುಃಖಮಯ ಕಾರ್ಯ ಅಂದು ಡಾ. ಕಿರಣ್ ರವರ ಹೆಗಲಿಗೆ ಬಿದ್ದಿತ್ತು. 'ಅವರಿಂದ ಧೀರ್ಘಕಾಲಾವಧಿಯ ಉಚಿತ ಸೇವೆಯನ್ನು ಪಡೆದ ಊರಿನ ಜನಗಳು ಇಂದು ಇಷ್ಟು ಕಠೋರವಾಗೇಕೆ ವರ್ತಿಸಿದರು? ಎಲ್ಲ ಸಮುದಾಯಗಳಲ್ಲೂ ಕಾಣಬರುವ  "ಮುಗ್ಧಜೀವಿಗಳ ನಿಜರೂಪ"ವನ್ನು ಕೋವಿಡ್ ಸಂಕಟವಿಂದು ಅನಾವರಣಗೊಳಿಸಿತೆ?  ಅಥವಾ ಅಂತಹ ಮುಗ್ಧಜೀವಿಗಳನ್ನು ಪ್ರಚೋದಿಸುವ ದುಷ್ಟಕೂಟವೊಂದಿದೆಯೆ?  ಕೋವಿಡ್ ಹರಡುವ ಭಯವಿದ್ದ ಮಾತ್ರಕ್ಕೆ, ಜನಗಳ ಗೂಂಡಾವರ್ತನೆ ಸರಿಯೆ? ಕೋವಿಡ್ನಿಂದ ಮೃತಪಟ್ಟವರ ಶವವನ್ನು ಮಣ್ಣು ಮಾಡುವಾಗ ಅನುಸರಿಸುವ ಮುನ್ನೆಚ್ಚಿರಿಕೆಗಳನ್ನು ವಿವರಿಸಿದ್ದೂ, ಅವರುಗಳಿಗೆ ತಿಳಿಯದಾಯಿತೆ? ದಿನನಿತ್ಯ ಅವರುಗಳ ಸೇವೆಯಲ್ಲಿ ನಿರತರಾಗಿರುವ ವೈದ್ಯರುಗಳ ಮಾತಿಗೆ ಅವರಲ್ಲಿ ಬೆಲೆಯಿಲ್ಲದಾಯಿತೆ? ಡಾ. ಸುಲೋಚನಾರವರೇ ಏಕೆ? ಯಾವುದೇ ಸಾಧಾರಣ ವ್ಯಕ್ತಿ , ಯಾವುದೇ ಕಾರಣಕ್ಕೆ  ಮೃತಪಟ್ಟರೆ, ಅವನಿಗೊಂದು ಗೌರವಯುತ "ಅಂತಿಮ ವಿದಾಯ" ನೀಡಬೇಕೆಂಬುದನ್ನು ಜನಗಳು ಮರೆತರೆ?'  ಡಾ. ಕಿರಣರ ಪ್ರಲಾಪ ಲಹರಿ ಮುಂದುವರೆದಿತ್ತು. ತರುಣ ವೈದ್ಯರಾದ ಅವರಿಗೆ ಸಾವೆಂಬುದು ಹೊಸದೇನಾಗಿರಲಿಲ್ಲ.  ಆದರೂ ತಮ್ಮ ಅತ್ಯಂತ ಪ್ರೀತಿಪಾತ್ರವಾದ ಜೀವವೊಂದಕ್ಕೆ ಅಂತಿಮ ವಿದಾಯ ನೀಡುವ ಸಂದರ್ಭದಲ್ಲಿ, ಊರಿನ ಜನರುಗಳು ಪ್ರದರ್ಶಿಸಿದ ರಾಕ್ಷಸೀ ವರ್ತನೆ ಮಾತ್ರ ಕಿರಣರಿಗೆ ಬೇಸರ ಮೂಡಿಸಿದ್ದು ಸುಳ್ಳಲ್ಲ. 

ಕೊರೋನಾ ಸೇನಾನಿಗಳಿಗೆ ಸ್ವಾರ್ಥವೆಂಬುದಿಲ್ಲ. ಕರ್ತವ್ಯದ ಅನಿವಾರ್ಯತೆಗಳಿಗಾಗಿ ತಮ್ಮ ಜೀವವನ್ನೇ ಒತ್ತೆ ಇಟ್ಟಿರುವ ಅವರುಗಳಿಗೆ, ಸತ್ತಾಗ ನೀಡುವ '೨೧ ತುಪಾಕಿಗಳ ಸದ್ದಿ'ನ ಗೌರವದ ನಿರೀಕ್ಷೆ ಕಿಂಚಿತ್ತೂ ಇರುವುದಿಲ್ಲ. ಅವರುಗಳು ಬಯಸುವುದು 'ಸೇವಾ ನಿರತರುಗಳಾಗಿರುವಾಗ ಬೇಕಾದ ರಕ್ಷಣೆ  ಮಾತ್ರ.' ಒಂದೊಮ್ಮೆ ಸತ್ತರಂತೂ ಇನ್ನೇನು ಉಳಿದಿರದು. ಆದರೂ 'ಸಾವಿಗೊಂದು ಘನೆತೆ ಇದೆ. ಆ ಘನೆತೆಯನ್ನು ಕಾಪಾಡಲು ಮೃತ ಆತ್ಮಕ್ಕೊಂದು ಗೌರವಯುತ ಅಂತಿಮ ವಿದಾಯವನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಲ್ಲವೆ?' ಎಂಬಾ ಯೋಚನೆಯಲ್ಲಿ ಮುಳುಗಿದ ಕಿರಣ್ ಕೂತ  ಕುರ್ಚಿಯಲ್ಲೇ  ನಿದ್ದೆಗೆ ಜಾರುವಷ್ಟರಲ್ಲೇ, ಹೊಸದೊಂದು ದಿನದ ಸೂರ್ಯೋದಯವಾಗಿತ್ತು.                                                                                          ***


          

Wednesday 4 November 2020

India behind Bangladesh?

                               

Will Bangladesh beat India in 2020? Yes, says an IMF prediction in the Per Capita Income (PCP) contest.  Bangladesh at US$1888 is set to beat India struggling at US$1877, by the end of 2020! Sri Lanka ($3700), Vietnam ($3500), Indonesia ($4000) and Thailand ($7300) are all much ahead of India. We are no match to the Asian giant China ($10,839).

What is painful to observe is that the PCP during 1990 (the period around which India embraced economic reforms), of India ($385) was ahead of Bangladesh ($329) and even China ($349)!

China growth story is unprecedented.  Strong leadership, non-democratic and authoritarian, liberal economic reforms since 1980 resulting in huge capital inflow from foreign countries, migrating labour from agriculture to services and industries, huge investment in infra and education and focus on export-oriented growth have all pushed China to the status of world's economic superpower.

But the success story of Bangladesh is baffling us! Bangladesh economic reforms have even attracted industrialists from India to shift their bases.  Aided by the power of cheap labour, Bangladesh has beaten India in the garment sector, cornering the export market spread over US and Europe. But many consider comparing Bangladesh with India is not appropriate, as the GDP of that country at about $ 347 billions is no where near India's GDP of  $2,650 billions.  But it's time India recalls the contest between hare and the tortoise! Certainly there is no room for complacence.  


No doubt, in GDP terms India has now become the 6th largest economy in the world leaving behind France. But during last 3 decades of reforms, India has witnessed a skewed economic growth, wherein 75% of wealth is in the hands of just 10% of the population.  Also in recent years 75% of wealth generated are being pocketed by just 1% of the population! This factor must be accounted while assessing the actual level of 'per capita income' of our average citizens, which may be far below the exalted claim of US $1,888. Still about 75 million Indians are struggling with extreme poverty.  

The news from Global Hunger Index 2020 also is a matter of concern, ranking India at 94 among 107 countries, far below our poor neighbors including Pak (88), Nepal (73), Bangladesh (75), Sri Lanka (64) and Myanmar (78). India's child care as revealed by the our ranks of wasting (low weight) and stunting (low height) among children below 5 years, also is abysmal. But I have my own doubts about the authenticity of these assessments.  With almost all state governments extending free food grains to poor families, situation can't be this bad. 
I may eat overnight left over rice, but not our house maid. I feel happy when she disdainfully refuses.
 

Many economists say that India's first four decades of freedom was wasted by placing it in ICU of public sector for too long. Reforms launched from 1991 has helped in loosening the shackles.  But India still suffers from lack of reforms and clarity about its ways and means. 

The rise of Modiji during 2014 had generated great hopes.  Good efforts are also visible by way of banking and tax reforms, land reforms, labour reforms, education sector reforms, farm sector reforms and so on. Investment in developing infra and education are also noteworthy.  But the growth figures as revealed since 2014 don't reveal any great strides, in spite of tall claims! If 'diversity' is India's strength, it's its weakness also! Vote bank politics is another folly which is defeating India.  Immature behaviour of political parties in opposing everything that the ruling party does is also not helping the cause. Our hostile neighbours are always a cause of worry, demanding a big share of our time, energy and money. There are natural challenges like inconsistent monsoon, floods, drought and cyclone too.

Some gains made in the recent past are substantially washed away by the corona pandemic. It has taken away the livelihoods of millions of poor people including street vendors, small businessmen, auto and taxi-drivers, MSME workers etc. Thanks to some sincere efforts, there are signs of recovery in the last couple of months, by way of good performance of our agri sector, continued FDI inflows, enhanced auto and tractor sales and better performance of the manufacturing sector. But God forbid, the fear of a looming second wave of the pandemic is threatening to spell doom for our economy. 

Let us remain optimistic. Covid vaccine may arrive assuring us safe dawn of a good new year 2021. Still we are the third largest economy in the world in terms of 'purchase power parity (PPP).' We have strong and stable Governments, both at the Centre and the States. We are an young country with a huge population of skilled and unskilled labour forces. Let us keep our hopes of becoming the five trillion economy by 2024.

-0-0-0-0-



Sunday 11 October 2020

 

Amitabh Bachchan (78), You may not know!

Amitabh is the son of Padma Bhushan Harivansh Rai Bachchan and Teji Bachchan of Allahabad, U.P.  Harivansh Rai  is a  great Hindi Literature giant.  He wanted to name Amitabh as 'Inquilab' (meaning 'revolution').


But later he changed it to 'Amitabh' (meaning 'brilliance unlimited').  Amitabh inherited his surname from his father's pen-name Bachchan (meaning 'child like'). Amitabh was initiated in to acting by his mother. 
   
      
 2.Amitabh is ambidextrous and therefore he can write with his both hands equally well.  But in films we have seen him as a left-hander.                                                                                                           
                                                                     
3.Amitabh wanted to become an engineer and wanted to join Indian Air Force.  

4.In search of a job, he came to Kolkata.  Amitabh's first employer was 'Bird & Company' who had                                                                                                                                                                                                                            

Paper Mills and Coal mines.  His first salary was about Rs.300.                        

5.Amitabh could not pass the voice test for entering All India Radio, Kolkata as a news-reader. His voice was termed as hoarse!  But we all know and love Amitabh for his majestic voice.                                                                                                                                        
6.With the help of actor Mehmood, Amitabh came to Mumbai seeking a career in acting.  His first film was 'Saat Hindustani' released during 1969.  

7.Late Prime Minister Indira Gandhi gave Amitabh an introduction letter addressed to her friend Nargis.  Therefore Nargis' husband Sunil Dutt gave Amitabh the role of a 'dumb' person in his film 'Reshma aur Shera' (1971).                                                                  

8.Amitabh came to limelight when he played a supporting role in the Rajesh Khanna starrer 'Anand' (1971). Rajesh Khanna was already a super-star by that time.  During the shooting period, Amitabh  
   
has confessed, that he was shy of talking to Rajesh Khanna.             
                                                                                                              
8.Before making a big breakthrough in the film Zanjeer (1973) as an angry young man, Amitabh had acted in 12 flop films.  His role  
in Zanjeer was first offered to Dev Anand who rejected and therefore Amitabh got the opportunity!

9.Amitabh has acted with almost all heroines of 3-4 generations of his period.  His wife Jaya Badhuri

too is a great actress.  But for Amitabh his most beautiful actress is Waheeda Rehman.    
                                                                                                             
10.Amitabh's 'special friend' and actress Rekha's birthday coincidentally falls on 10th October, just

one day prior to Amitabh's. Stars matched, but fate did not!                                 

11.Amitabh was voted as the 'star of the millenium' by BBC voters, 
putting him ahead of greats like Charlie Chaplin, Marlon Brando and Laurence Olivier.  Like Chaplin, a light sense of comedy while acting for different  types of roles is Amitabh's mark of genius.  Remember his soliloquy in front of the mirror in Amar, Akbar, Anthony!

 12.Amitabh was the first Asian actor to be honored with a wax-statue on display at Madam

Thussaud's, London. I can be seen with his statue here along with my wife.                                                                                               
13. Amitabh is a T.B.survivor.  He was detected with T.B. of the spine when he was trying to revive his career with KBC during 2000.  This great man has never hided his disease from public domain

unlike so many ordinary people do. He told people that if T.B. can happen to him, it can happen to anybody.  He wanted to give a message to common men that TB is curable. He became an 'unpaid ambassador' of the Government for promoting awareness about T.B. Recognizing his services U.S.Government honored him (see Pic) with a special trophy during the 'World T.B. Day - 2004'.
                                                                                                                                                          
 14.Amitabh has also never hesitated to tell people that he is suffering from Liver Cirrhosis although he has never touched alcohol.  He contracted this disease when he received blood from about 200 voluntary donors,  when he was under treatment for the fatal injury he received during shooting of the film 'Coolie' during 1982. He says that he is living with just 25% liver.                                                                                                                                                                        
 15.Besides Amitabh also suffers from Asthma and a disease related to muscles. Since 1982 he is a frequent  patient to the Hospitals.  But he is able to overcome all these diseases because of his indomitable spirit to live and excel.  He is really great because he has disclosed all his ailments to people in order to fill them with courage.                                                         
Amitabh also tested Covid-positive during July, this year.  He never hesitated to share his experiences and thank doctors for the  great service being rendered to mankind. From being declared 'clinically dead' to TB to Covid-19 and even bankruptcy, Amitabh has conquered it all.
                                                    
                                                                          
16.Amitabh is also an 'unpaid ambassador' for more public causes. Gujarat Tourism received a very 
 big boost after he started spreading 'khushboo Gujarat Ki' in his inimitable style.  It is equally heartening to see him promoting 'Swachh Bharat',  never hesitating to become one with rural people in politely guiding them towards 'Sulabh Shauchalayas'. 

Amitabh Bachchan's life itself is a great message for all of us, especially to youngsters.  For him 'work is worship and birth is a God given gift to live and excel irrespective of obstacles'.  He does not believe in delivering sermons.  He guides people by 'walking the talk'!  May God bless him and his family with very long life, health, happiness and prosperity.                                                        

          -0-0-0-0-0-0-0-0-0-0-0-      

  Thank you for patiently reading my article.  You can send me your valuable feedback in this site itself.  You can also reach me at klakshminarayana1956@rediffmail.com,  mobile no. 98455 62603, and on facebook at Lakshminarayana Krishnappa.

Friday 9 October 2020

1.ಕೊರೋನ ಸಮರ

ದೀಪ ಬೆಳಗೋಣ ಬನ್ನಿ  
ಅಂದು ಮಾರ್ಚ್ ೨೨, ೨೦೨೦ರ ಭಾನುವಾರದ  ಸಂಜೆ ೫ ಸಮೀಪಿಸುತ್ತಿರುವ ಸಮಯ .  ರಸ್ತೆಯ ಎರಡೂ ಬದಿಯ ತಮ್ಮ-ತಮ್ಮ ಮನೆಗಳ ಮುಂದೆ ಜನಗಳು ನೆರೆದಿದ್ದರು .  ಕೆಲವರು ತಮ್ಮ ಮನೆಯ ಮೇಲ್ಛಾವಣಿಯ  ಮೇಲೂ ಹತ್ತಿ ನಿಂತಿದ್ದರು.  ಅವರುಗಳೀಗ ತಮ್ಮ ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಕೋರಿಕೆಯನ್ನು ಪರಿಪಾಲಿಸಬೇಕಿತ್ತು.  ಕೊರೋನಾ ಮಹಾಮಾರಿಯ ವಿರುದ್ಧದ ಸಮರದಲ್ಲಿ  ಅವಿರತವಾಗಿ ಹೋರಾಡುತ್ತಿರುವ, ವೈದ್ಯಕೀಯ ಸಿಬ್ಬಂಧಿ, ಪೊಲೀಸರು, ಮಾಧ್ಯಮ ಮಿತ್ರರು, ಪೌರಕಾರ್ಮಿಕರು, ಅವಶ್ಯಕ ವಸ್ತುಗಳ ವಿತರಕರು, ಬ್ಯಾಂಕ್ ಕರ್ಮಚಾರಿಗಳು, ಅಂಚೆ ಕರ್ಮಚಾರಿಗಳು ಮುಂತಾದವರನ್ನೊಳಗೊಂಡ  ಲಕ್ಷ-ಲಕ್ಷ  'ಕೊರೋನಾ ಸೇನಾನಿ'ಗಳನ್ನು, ಅಭಿನಂದಿಸಿ ಪ್ರೋತ್ಸಾಹಿಸುವ ಮಹಾಕಾರ್ಯ ಅವರುಗಳದಾಗಿತ್ತು.  

ಸಂಜೆ ೫ರ ಸಮಕ್ಕೆ ಸರಿಯಾಗಿ, ನೆರೆದ ಜನಗಳೆಲ್ಲರೂ ತಾವುಗಳು ನಿಂತಲ್ಲಿಯೇ ಚಪ್ಪಾಳೆ ತಟ್ಟಲು ಆರಂಭಿಸಿದರು.  ಗಂಟೆ, ಜಾಗಟೆಗಳೂ ಸದ್ದು ಮಾಡಿದವು. ಕೆಲವರಂತೂ ತಮ್ಮ ಮನೆಯ ಪಾತ್ರೆ, ತಟ್ಟೆಗಳನ್ನೇ ಬಡಿದು ಸಂಭ್ರಮಿಸಿದರು.  ಶಂಖನಾದಗಳೂ  ಮೊಳಗಲಾರಂಭಿಸಿದವು.  ಆ ಬಡಾವಣೆಯ ಬಹು ಕಾಲದ ನಿವಾಸಿಯಾಗಿದ್ದ ಹಿರಿಯ  ರಾಜುರವರು, ತಮ್ಮ ಸುತ್ತಲಿನ ಜನಗಳನ್ನು ಹುರಿದುಂಬಿಸುವುದರಲ್ಲಿ ನಿರತರಾಗಿದ್ದರು. ಸಮಾಜ ಶಾಸ್ತ್ರ  ಸಂಶೋಧಕಿಯೂ, ಪ್ರಗತಿಪರ ಚಿಂತಕಳೂ ಆದ ರಾಜುರವರ ಪ್ರೀತಿಯ ಮಗಳು ರೋಹಿಣಿ ಕೂಡ ತಮ್ಮ ತಂದೆಯ ಕಾರ್ಯದಲ್ಲಿ ಕೈ ಜೋಡಿಸಿದ್ದಳು.  ತಂತ್ರಜ್ಞಾನ-ಉತ್ಸಾಹಿಯಾಗಿದ್ದ ಅವಳು, ತನ್ನ ಐ-ಫೋನಿನ ಗಂಟಾನಾದವು  ಬ್ಲೂಟೂಥ್ ಮುಖಾಂತರ ತನ್ನ ಸ್ಪೀಕರ್ ಗಳಲ್ಲಿ ಭೋರ್ಗರೆಯುವಂತೆ ಮಾಡಿದ್ದಳು.  ಕೆಲವರು ತಮ್ಮ ಮೊಬೈಲ್ ಗಳ ಮುಖಾಂತರ ಕರತಾಡನದ ಈ ದೃಶ್ಯಗಳನ್ನು  ಚಿತ್ರೀಕರಿಸುತಿದ್ದರು. ಆಬಾಲವೃದ್ಧರಾದಿಯಾಗಿ ರಸ್ತೆಯ ಎಲ್ಲರೂ ಅತ್ಯುತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.  ಕರತಾಡನದ ಕಲಾಪ ಸುಮಾರು ೧೫ ನಿಮಿಷಗಳವರೆಗೆ ನಡೆಯಿತು. ಉತ್ಸಾಹಿ ಹಿರಿಯ ರಾಜುವಿಗೆ, ತನ್ನ ರಸ್ತೆಯೇ ಕೊರೋನಾ ಸೇನಾನಿಗಳಿಗೆ ಚಪ್ಪಾಳೆಗಳ ಮೂಲಕ ಗೌರವವನ್ನು ಸಮರ್ಪಿಸುತ್ತಿರುವ 'ಪುಟ್ಟದೊಂದು ಭಾರತ'ದಂತೆ ಕಂಡಿತು.  

ಮರುದಿನ ಸಾಮಾಜಿಕ ಜಾಲತಾಣಗಳಲ್ಲಿ , ಹಿರಿಯ ವೃದ್ಧೆಯಾದ ಪ್ರಧಾನಿ ಮೋದಿಯವರ ಪೂಜ್ಯ ಮಾತೆಯವರು, ಗುಜರಾತ್ ನ ಗಾಂಧಿನಗರದ ತಮ್ಮ ಮನೆಯ ಮುಂದೆ ತಟ್ಟೆ ಬಡಿದು ನಮ್ಮ ಕೊರೋನಾ ಸೇನಾನಿಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದ ವೀಡಿಯೊ ಜಗಜ್ಜಾಹೀರಾಗಿತ್ತು. ಈ ಚಿತ್ರಣ ಕುರಿತು ಪ್ರಧಾನಿ ಮೋದಿಯವರು ತಮ್ಮ ಟ್ವಿಟ್ಟರ್ನಲ್ಲಿ, 'ಹಿರಿಯರಾದ ತಮ್ಮ ಆಶೀರ್ವಾದಗಳಿಂದ  ನಮ್ಮ ಕೊರೋನಾ ಕಾರ್ಯಕರ್ತರುಗಳಿಗೆ ಆನೆಯ ಬಲ ಬಂದಿದೆ,' ಎಂದು ಬರೆದಿದ್ದರು. ಈ ಎರಡೂ  ದೃಶ್ಯಗಳನ್ನು ತಮ್ಮ ಮಗಳು ರೋಹಿಣಿಯ ಗಮನಕ್ಕೆ ತರುವುದನ್ನು ರಾಜುರವರು ಮರೆಯಲಿಲ್ಲ.  ರೋಹಿಣಿ ಕೂಡ ಎರಡೂ ದೃಶ್ಯಗಳನ್ನು ನೋಡಿ ತಲೆದೂಗಿದ್ದು, ತಂದೆಗೆ ಸಮಾಧಾನ ತಂದದ್ದು ಸುಳ್ಳಲ್ಲ. 

ಅಂದಿನ ದಿನಪತ್ರಿಕೆಗಳ ತುಂಬಾ ದೇಶದ ವಿವಿಧ ಮೂಲೆಗಳಲ್ಲಿ ಉತ್ಸಾಹಿ ಜನತೆ ನಮ್ಮಕೊರೋನಾ ಸೇನಾನಿಗಳಿಗೆ ಕರತಾಡನ ಮಾಡಿ ಧನ್ಯವಾದಗಳನ್ನರ್ಪಿಸಿದ ಚಿತ್ರಗಳೇ ತುಂಬಿದ್ದವು. ನಾವು  ಯಾರಿಗೂ ಕಮ್ಮಿಯಿಲ್ಲವೆನ್ನುವಂತೆ ರಾಜಕಾರಣಿಗಳು, ಚಲನ ಚಿತ್ರ ಗಣ್ಯರು, ಕ್ರೀಡಾಪಟುಗಳು, ಮುಂತಾದವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾದ ದೃಶ್ಯಗಳು ಕೂಡ ಎಲ್ಲರ ಗಮನ ಸೆಳೆದಿದ್ದವು. ನಿಧಾನವಾಗಿ  ಇಡೀ ದೇಶವನ್ನೇ ಆವರಿಸುತ್ತಿರುವ ಕೊರೋನಾ ವಿರುದ್ಧದ  ಸಮರದಲ್ಲಿ ನಿರತರಾಗಿರುವ ನಮ್ಮ ಕಟ್ಟಾಳುಗಳನ್ನು ಕರತಾಡನದ ಮೂಲಕ ಜನಸಾಮಾನ್ಯರುಗಳು ಹುರಿದುಂಬಿಸಿದ ಚಿತ್ರಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು.  

ನಿನ್ನೆಯ ಕರತಾಡನೆಯ ಕಾರ್ಯಕ್ರಮದಲ್ಲಿ ವಿರೋಧಾಭಾಸಗಳು ಇಲ್ಲದಿರಲಿಲ್ಲ.  ಅಂತಹ ಅವಿವೇಕದ ದೃಶ್ಯಗಳನ್ನು ತನ್ನ ತಂದೆಗೆ ತೋರಿಸಿ ಛೇಡಿಸುತ್ತಾ ರೋಹಿಣಿ, 'ಅಪ್ಪ ಇಲ್ಲಿ ನೋಡಿ, ನಿಮ್ಮ ಜನಗಳಿಗೆ ಶಿಸ್ತು-ಸಂಯಮ ಎಲ್ಲಿದೆ? ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಗುಂಪುಗೂಡಿ, ಘೋಷಣೆಗಳನ್ನು ಕೂಗುತ್ತಾ, ಧ್ವಜಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗುತಿದ್ದರಲ್ಲಾ! ಇದೇನು  ಸಂಭ್ರಮಾಚರಣೆಯ ಸಂಧರ್ಭವೇ?' ಎಂದಿದ್ದಳು.  ರಾಜುರವರು ಕೂಡ ಇದು ಸರಿಯಲ್ಲವೆಂದು ಗೋಣಾಡಿಸುವಂತಾಗಿತ್ತು. 

ವಿಚಲಿತರಾದರು, ಬೇಗ ಸಮಸ್ಥಿತಿಗೆ ಮರಳಿದ ರಾಜುರವರು ತಮ್ಮ ಮಗಳಿಗೆ ಪರಿಸ್ಥಿತಿಯನ್ನು ವಿವರಿಸಲು  ಸನ್ನದ್ಧರಾದರು. 'ಹೌದು, ಕೆಲವರು ೧೪ ಗಂಟೆಗಳ ಜನತಾ ಕರ್ಫ್ಯೂವಿನ ಗಾಂಭೀರ್ಯಕ್ಕೆ ಧಕ್ಕೆ ತರುವಂತೆ ವರ್ತಿಸಿರಬಹುದು. ಆದರೆ ಪ್ರಧಾನಿಯವರ ಕರೆಗೆ ಅಭೂತಪೂರ್ವ ಪ್ರತಿಕ್ರಿಯೆ ದೇಶದ ಜನಗಳಿಂದ ದೊರೆತದ್ದು ಸುಳ್ಳಲ್ಲ. ದೇಶಾದ್ಯಂತ ನಾಗರಿಕರು ತಮ್ಮ ತಮ್ಮ ಮನೆಗಳ ಮುಂದೆ ನಿಂತು ಚಪ್ಪಾಳೆ ತಟ್ಟುತ್ತಾ, ತಮಟೆಗಳನ್ನು ಬಡಿಯುತ್ತಾ, ಶಂಖನಾದ ಮಾಡುತ್ತಾ, ಜಾಗಟೆಗಳನ್ನು ಬಡಿಯುತ್ತಾ, ಒಕ್ಕೊರಲಿನಲ್ಲಿ ನಮ್ಮ ಕೊರೋನಾ ಸೇನಾನಿಗಳಿಗೆ ಧನ್ಯವಾದಗಳನ್ನರ್ಪಿಸಿದ್ದು, ಏಕತೆಯ ಮತ್ತು ಧೃಢ ನಿಶ್ಚಯದ ಸಂಕೇತವೇ ಸರಿ,' ಎಂದು ರಾಜು ವಿವರಿಸಿದಾಗ, ಮಗಳು ರೋಹಿಣಿಯೇನು ಸಮ್ಮತಿಸಿದಂತೆ ತಲೆದೂಗಲಿಲ್ಲ. 

ಸಾಮಾಜಿಕ ಜಾಲತಾಣಗಳನ್ನು ಕೆದಕುವಲ್ಲಿ ರೋಹಿಣಿ ಸಿದ್ಧಹಸ್ತೆ.   ತಂದೆ ರಾಜುವಿಗೆ ಅತಿಪ್ರಿಯರಾದ, ಸಂಪೂರ್ಣ ಭಾರತ ಖ್ಯಾತಿಯ ಹಿರಿಯ ಚಿತ್ರನಟರೊಬ್ಬರ ಟ್ವೀಟೊಂದನ್ನು ಉಲ್ಲೇಖಿಸುತ್ತಾ, 'ಅಪ್ಪಾ,  ಇಲ್ಲಿ ನೋಡಿ, ನಿಮಗೆ ಪ್ರಿಯರಾದ ಆ ಶ್ರೀಯುತರು ಏನು ಹೇಳಿದ್ದಾರೆ? ಚಪ್ಪಾಳೆ-ಶಂಖನಾದಗಳ ಭೋರ್ಗರೆತದಿಂದ ಉಂಟಾದ ಕಂಪನ, ಅಮಾವಾಸ್ಯೆ ದಿನವಾದ ಅಂದು, ಕೊರೋನಾ ವೈರಾಣುವಿನ ತೀವ್ರತೆಯನ್ನು ಕುಂದಿಸುವಲ್ಲಿ ಯಶಸ್ವಿಯಾಗಿದೆಯಂತೆ!'  ಎಂಬ ವಾಕ್ಯವನ್ನು ತೋರಿಸಿ ನಕ್ಕಳು.  ತನ್ನ ವಾದ ಸರಣಿಯನ್ನು ರೋಹಿಣಿ ಮುಂದುವರೆಸುತ್ತಾ, 'ಕೆಲವು ಸ್ವಘೋಷಿತ ಬುದ್ಧಿಜೀವಿಗಳ ಪ್ರಕಾರ, ಅಮಾವಾಸ್ಯೆ ದಿನವಾದ ಅಂದೇ, ಸಂಜೆ ೫ರ ಸಮಯಕ್ಕೆ ಕರತಾಡನದ ಕಾರ್ಯಕ್ರಮವನ್ನು ಏರ್ಪಡಿಸುವಂತೆ ಪ್ರಧಾನಿಗಳಿಗೆ ಹಲವು ಜ್ಯೋತಿಷಿಗಳು ಸಲಹೆ ನೀಡಿದ್ದರಂತೆ.  ವಾಟ್ಸಾಪ್ನಲ್ಲಿ ಹರಿದಾಡಿದ ಸುದ್ದಿಪ್ರವಾಹಗಳ ಪ್ರಕಾರ, "ನಾಸಾ"ದ ಉಪಗ್ರಹಗಳು ಅಂದಿನ ಕರತಾಡನದ ಸಮದಲ್ಲಿ ಭಾರತದಿಂದ  ಕೊರೋನಾ ವೈರಾಣುಗಳು ಹಿಮ್ಮೆಟ್ಟುತ್ತಿರುವ ದೃಶ್ಯಗಳನ್ನು  ಸೆರೆ ಹಿಡಿದಿವೆಯಂತೆ! ಇವೆಲ್ಲಾ ನಿಜವೆಂದು ನೀವೂ ನಂಬುವಿರಾ?' ಎಂದು ತಂದೆಯನ್ನು ಪ್ರಶ್ನಿಸಿದಳು.  ಅವೆಲ್ಲಾ ಅತ್ತ್ಯುತ್ಸಾಹಿಗಳ  ಕಪೋಲ ಕಲ್ಪಿತ ಮಿಥ್ಯೆಗಳೆಂದು ರಾಜುವಿಗೂ ತಿಳಿಯದೆ ಇರಲಿಲ್ಲ.  

ಮಾಧ್ಯಮಗಳ ಒಳ ಹೊಕ್ಕ ರೋಹಿಣಿಯ ಶೋಧನೆ ಮುಂದುವರೆದಿತ್ತು.  ಕೆಲವರಂತೂ ಮಾರ್ಚ್ ೨೨ರ ಜನತಾ ಕರ್ಫ್ಯೂವನ್ನು ನಾಟಕವೆಂದೇ ಬಣ್ಣಿಸಿದ್ದರು.  'ವೈರಾಣು ವಿರುದ್ಧ ಹೋರಾಡುವ ನಿರ್ಧಿಷ್ಟ ಮಾರ್ಗಗಳನ್ನು ಹುಡುಕುವುದನ್ನು ಬಿಟ್ಟು, ಮೋದಿಜಿ ಜನಗಳಿಗೆ ಚಪ್ಪಾಳೆ ತಟ್ಟಲು ಆದೇಶಿಸಿದರು,' ಎಂಬುದು ಮತ್ತೆ ಕೆಲವರ ಗೇಲಿಯಾಗಿತ್ತು.  ಚಪ್ಪಾಳೆ ಕಾರ್ಯಕ್ರಮ ಪಾಶ್ಚಿಮಾತ್ಯ ರಾಷ್ಟ್ರಗಳ  ನಕಲು ಎಂಬುದು ಹಲವು ಸುಶಿಕ್ಷಿತರ ಟೀಕೆಯಾಗಿತ್ತು.  ದಕ್ಷಿಣ ಭಾರತದ ಖ್ಯಾತ ವೈದ್ಯರೊಬ್ಬರು ತಮ್ಮಬೇಡಿಕೆಗಳನ್ನು ಮುಂದಿಡುತ್ತಾ,  'ಮಾರ್ಚ್ ೨೨ರ ಸಂಜೆ ೫ಕ್ಕೆ ತಾವುಗಳು ನಮಗಾಗಿ ಹೊರಬಂದು ಚಪ್ಪಾಳೆ ತಟ್ಟುವುದು ಬೇಕಿಲ್ಲ.  ಅದರ ಬದಲು "ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಲಿ, ಕೋವಿಡ್ ಗಾಗಿ ಮುಡಿಪಿಟ್ಟ ಆಸ್ಪತ್ರೆಗಳ ಸಂಖ್ಯೆ ಹೆಚ್ಚಲಿ,  ಜೀವರಕ್ಷಕ ವೆಂಟಿಲೇಟರ್ ಗಳು ದೊರೆಯುವಂತಾಗಲಿ, ಕೋವಿಡ್ ಚಿಕಿತ್ಸೆಯ ಸಿಬ್ಬಂಧಿಗೆ ಹೆಚ್ಚು ರಕ್ಷಕ ಸಾಧನಗಳು ದೊರೆಯಲಿ, ಕೋವಿಡ್ನಿಂದ ದುಡಿಮೆಯಿಲ್ಲದೆ ಕುಳಿತಿರುವ ಬಡಬಗ್ಗರಿಗೆ ಆರ್ಥಿಕ ಸಹಾಯ ದೊರೆಯಲಿ," ಎಂದು ನಿಮ್ಮ ಪ್ರಧಾನಿಯನ್ನು ಆಗ್ರಹಿಸಿ' ಎಂದು ಜನಗಳಿಗೆ ಕರೆ ನೀಡಿದ್ದರು.  ಪ್ರಜ್ಞಾವಂತ ವಲಯಗಳಲ್ಲಿ ಈ ರೀತಿಯ ವಿಚಾರ ಧಾರೆಗಳಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು.  

ಪ್ರಗತಿಪರ ಚಿಂತಕಿಯಾದ ಮಗಳು ರೋಹಿಣಿಯ ವಿಚಾರ ಮಂಡನೆ, ರಾಜುರವರಿಗೂ ಮಂಕು ಬಡಿಸಿತ್ತು.  ಓಲೈಕೆಯ ಮಾರ್ಗಕ್ಕೆ ಮುಂದಾದ ತಂದೆ ರಾಜು, 'ಮಗಳೆ, ಪ್ರಜಾಪ್ರಭುತ್ವದಲ್ಲಿ ಟೀಕೆ-ಟಿಪ್ಪಣಿಗಳು ಇರಬೇಕಾದದ್ದೆ.  ಆದರೂ ಪ್ರಧಾನಿ ಮೋದಿಜಿಯವರ ಮಾರ್ಚ್ ೨೨ರ ಚಪ್ಪಾಳೆ ಕಾರ್ಯಕ್ರಮ ಇಡೀ ದೇಶದ ಜನತೆಗೆ ಕೊರೋನಾ ಹೆಮ್ಮಾರಿಯ ಬಗ್ಗೆ ಎಚ್ಚರಿಕೆ ಮೂಡಿಸಿದ್ದು ಸುಳ್ಳಲ್ಲ.  ಮುಂಬರಲಿರುವ ಹಲವು ದಿನಗಳ ಎಡೆಬಿಡದ ಕರ್ಫ್ಯೂವಿಗೆ, ಜನತೆಯ ಮಾನಸಿಕತೆಯನ್ನು ಅಣಿಗೊಳಿಸುವ ಕೆಲಸ ಈ ಒಂದು ದಿನದ ಸ್ವಪ್ರೇರಿತ ಕರ್ಫ್ಯೂ ಮಾಡಿದೆ.  "ವೈದ್ಯೋ ನಾರಾಯಣೋ ಹರಿಃ" ಎಂಬುದು ನಮ್ಮ ಸಂಸ್ಕೃತಿಯ ವಾಣಿ.  ಅದೇ ವಾಣಿಯ ಅರ್ಥವನ್ನು ವಿಸ್ತರಿಸುತ್ತಾ, ನಮ್ಮ ಪ್ರಧಾನಿಯವರು, ನಮ್ಮೆಲ್ಲಾ ಕೊರೋನಾ ಸೇನಾನಿಗಳಿಗೆ ಕೃತಜ್ಞತೆಯನ್ನು ಸಮರ್ಪಿಸಲೆಂದು, ಅಂದಿನ ಚಪ್ಪಾಳೆ ಕಾರ್ಯಕ್ರಮಕ್ಕೆ ಕರೆ ನೀಡಿದ್ದರು' ಎಂದು ವಿವರಿಸಿ ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.
                                                                            ***

 ಒಂದು ದಿನದ ಜನತಾ ಕರ್ಫ್ಯೂವಿನ ಕಾವು ಹೆಚ್ಚು ದಿನ  ಉಳಿಯಲಿಲ್ಲ.  ಹೆಮ್ಮಾರಿಯಂತೆ ಹರುಡುತಿದ್ದ ಕೋವಿಡ್ ಅನ್ನು ತಡೆಯುವುದು ಹೇಗೆಂಬುದೇ ಎಲ್ಲ ರಾಜ್ಯ ಸರ್ಕಾರಗಳಿಗೆ ದೊಡ್ಡ ತಲೆನೋವಾಗಿತ್ತು.  ಕೋವಿಡ್ ಖಚಿತಗೊಂಡ ರೋಗಿಗಳಿದ್ದ ೮೨ ಜಿಲ್ಲೆಗಳನ್ನೊಳಗಂಡ ಆಯಾ ರಾಜ್ಯ ಸರಕಾರಗಳು, ಆಯಾ ಜಿಲ್ಲೆಗಳಲ್ಲಿ ಮಾರ್ಚ್ ೩೧ರವರೆಗಿನ 'ಲಾಕ್ ಡೌನ್ ' ಘೋಷಿಸಿದ್ದವು.  ಹಲವು ರಾಜ್ಯಗಳು ಅಂತರ-ರಾಜ್ಯ ಬಸ್ ಸಂಚಾರಕ್ಕೂ ನಿರ್ಬಂಧ ಹೇರಿದ್ದವು .  ಮೆಟ್ರೋ-ರೈಲು ಸಂಚಾರಕ್ಕೂ ನಿರ್ಬಂಧನೆ ಹೇರಬೇಕೆಂಬ ಯೋಚನೆ ಕೇಂದ್ರ ಸರ್ಕಾರದ್ದಾಗಿತ್ತು.  ಇಡೀ ರಾಷ್ಟ್ರದಲ್ಲಿ ರೈಲುಗಳ ಸಂಚಾರವನ್ನು ನಿಲ್ಲಿಸುವ ಬಗ್ಗೆ ವದಂತಿಗಳು  ಹರಿದಾಡುತ್ತಿದ್ದವು.  ಇಷ್ಟು ನಿರ್ಬಂಧ  ಸಾಲದೆಂಬದು ಸಾಮಾನ್ಯ ಜನತೆಗೂ ತಿಳಿದಿತ್ತು.  ೭೦೦ಕ್ಕೂ ಹೆಚ್ಚು ಜಿಲ್ಲೆಗಳಿರುವ ಈ ಬೃಹತ್  ದೇಶದಲ್ಲಿ, ಕೇವಲ ೮೨ ಜಿಲ್ಲೆಗಳಲ್ಲಿ ನಿರ್ಬಂಧ ಹೇರಿದ್ದು ಸಾಕೆ?  ಎಂಬುದು ಹಲವರ ಪ್ರಶ್ನೆಯಾಗಿತ್ತು.  

ಜನತಾ ಕರ್ಫ್ಯೂವಿನ ಯಶಸ್ಸಿಗೆ ದೇಶದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಪ್ರಧಾನಿ ಮೋದಿಯರು ಇನ್ನೂ ದೀರ್ಘವಾದ ಹೋರಾಟದ ಎಚ್ಚರಿಕೆ ನೀಡಿದ್ದರು. 'ಇಂದಿನ ಜನತಾ ಕರ್ಫ್ಯೂವೇನೋ ಈ  ರಾತ್ರಿಯ ೯ಕ್ಕೆ ಮುಕ್ತಯವಾಗಲಿದೆ. ಇದು ಸಂಭ್ರಮಿಸುವ ಸಮಯವಲ್ಲ.  ಮುಂದಿದೆ ಸುಧೀರ್ಘ ಹೋರಾಟ. ಆ ಹೋರಾಟಕ್ಕೆ ನಾವು ಸಿದ್ಧರಿದ್ದೇವೆ ಎಂಬುದನ್ನು ದೇಶದ ಜನತೆ ಇಂದು ಸಾಬೀತು ಪಡಿಸಿದೆ' ಎಂದು ಮೋದಿಜಿ ಟ್ವೀಟಿಸಿದ್ದರು.  

'ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್  ಅನ್ನು ಕೂಡಲೇ ಜಾರಿಗೊಳಿಸಿ' ಎಂಬುದು ವೈದ್ಯಕೀಯ ವಿಶೇಷಜ್ಞರ ಅಭಿಮತವಾಗಿತ್ತು.  'ಚೀನಾಕ್ಕೆ ಮೊದಲು ಹರಡಿದ ಕೋವಿಡ್ ವೈರಾಣು, ನಂತರ ಯುರೋಪ್ ಮತ್ತು ಅಮೇರಿಕಾ ದೇಶಗಳಿಗೂ ಹಬ್ಬಿತು. ನಮ್ಮ ಸುದೈವವೋ ಏನೋ,  ನಮ್ಮ ದೇಶಕ್ಕೆ ಕೋವಿಡ್ ತಡವಾಗಿ ಹಬ್ಬಿದೆ.  ಕಠಿಣ ಕ್ರಮಗಳನ್ನು ಶೀಘ್ರವಾಗಿ ಜಾರಿಗೊಳಿಸಿದ ಚೀನಾ, ಕೋವಿಡ್ ಮೇಲೆ ಅತ್ಯಂತ ಬೇಗ ನಿಯಂತ್ರಣವನ್ನು ಸಾಧಿಸಿತು. ಆ ರೀತಿಯ ಕಠಿಣ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಯುರೋಪ್ ಹಾಗೂ ಅಮೇರಿಕಾ ದೇಶಗಳು ವಿಳಂಬ ಮಾಡಿದ್ದವು.  ಅದರ ಪರಿಣಾಮ ಈಗ ಎಲ್ಲರ ಮುಂದಿದೆ.  ಆ ದೇಶಗಳಲ್ಲೀಗ  ಕೋವಿಡ್ ಕಾಳ್ಗಿಚ್ಚಿನಂತೆ ಹರಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ.  ಯೂರೋಪಿನ ಇಟಲಿಯ ಪರಿಸ್ಥಿತಿಯಂತೂ ಶೋಚನೀಯ.  ಆ ರೀತಿಯ ತೀವ್ರ ಹರಡುವಿಕೆ ನಮ್ಮ ದೇಶದಲ್ಲಿ ಉಂಟಾದಲ್ಲಿ, ನಮ್ಮಲ್ಲಿರುವ ಸಾಧಾರಣ ಮಟ್ಟದ ವೈದ್ಯಕೀಯ ಸೌಲಭ್ಯಗಳೊಂದಿಗೆ ಕೋವಿಡ್ ಮಹಾಮಾರಿಯನ್ನು ನಿಭಾಯಿಸಲು ಸಾಧ್ಯವೇ?' ಎಂಬುದು ತಜ್ಞರುಗಳ ಕಳವಳವಾಗಿತ್ತು.  

ರೋಹಿಣಿಯ ತನಿಖಾ ದೃಷ್ಟಿ 'ಮುಂದೇನು' ಎಂಬುದನ್ನು ಹುಡುಕುತ್ತಿತ್ತು.  ಕೋವಿಡ್ ವೈರಾಣು ಬಹು ಬೇಗ ಹರಡುವಂಥದ್ದು ಎಂಬುದು ತಜ್ಞ ವೈದ್ಯರುಗಳ ಅಭಿಪ್ರಾಯವಾಗಿತ್ತು.  ಸೋಂಕಿತರ ಬಾಯಿ  ಮತ್ತು ಮೂಗಿನ ಮೂಲಕ ಒಸರುವ ಸಣ್ಣ ತುಂತುರಗಳಿಂದ ಹರಡುವ ಈ ಹೆಮ್ಮಾರಿ, ಜನ ಸಂಪರ್ಕ ಮತ್ತು ಗಾಳಿಯ ಮೂಲಕ ಹರಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.  ತೀವ್ರ ಸೋಂಕಿಗೊಳಗಾಗಿರುವ ರೋಗಿಗಳ ಸಾಗರವನ್ನೇ ಎದುರಿಸಿತ್ತಿರುವ  ಇಟಲಿಯ ವೈದ್ಯರುಗಳಿಗೆ, ಸಲಕರಣೆಗಳ ಹಾಗು ಔಷಧಿಯ ಕೊರತೆಯುಂಟಾಗಿ,  'ಚಿಕಿತ್ಸೆ ಯಾರಿಗೆ ನೀಡುವುದು, ಯಾರಿಗೆ ಬಿಡುವುದೆಂಬ' ದ್ವಂದ್ವ ಕಾಡಿತ್ತು. ೮೦ ವಯಸ್ಸು ಮೀರಿರುವ ಕೋವಿಡ್ ರೋಗಿಗಳಿಗೆ ಇಟಲಿ ವೆಂಟಿಲೇಟರ್ಗಳನ್ನು ಒದಗಿಸುತ್ತಿಲ್ಲವೆಂಬ ವರದಿಗಳು ಎಲ್ಲಡೆ ಹರಿದಾಡಿದ್ದವು.  ಆ ರೀತಿಯ ವಿಪ್ಲವ ಎದುರಾದಲ್ಲಿ, ಭಾರತ ನಿಭಾಯಿಸಬಲ್ಲುದೇ ಎಂಬ ಆತಂಕ ತಜ್ಞರುಗಳನ್ನು ಕಾಡಿತ್ತು.  

'ಪರಿಸ್ಥಿತಿ ಕೈ ಮೀರುವ ಮುನ್ನ ದೇಶಾದ್ಯಂತ ಲಾಕ್ ಡೌನ್  ಜಾರಿಗೊಳಿಸಿ' ಎಂಬುದು ಸಮಾಜ ಆರೋಗ್ಯಾಧಿಕಾರಿಗಳ ಅಭಿಮತವಾಗಿತ್ತು. ಲಾಕ್ ಡೌನ್  ಜಾರಿ ವಿಳಂಬವಾದಲ್ಲಿ ಉಂಟಾಗಬಹುದಾದ ಸೋಂಕಿತರ ಸಂಖ್ಯೆಗಳ  ಏರಿಕೆಯ ಅನುಮಾನ ಎಲ್ಲರನ್ನು ಭಯಭೀತರನ್ನಾಗಿಸಿತ್ತು.  'ನಮ್ಮಲ್ಲಿ ಲಭ್ಯವಿರುವ ಆಸ್ಪತ್ರೆ ಹಾಸಿಗೆಗಳು, ಐ.ಸಿ.ಯು.ಗಳು ಹಾಗು ವೆಂಟಿಲೇಟರ್ಗಳ  ಸಂಖ್ಯೆ ಸಾಕೆ? ರೋಗಿಗಳಿಗೆ ನಾವು ಸಮರ್ಪಕವಾಗಿ ಆಮ್ಲಜನಕವನ್ನು ಒದಗಿಸಬಲ್ಲೆವೆ? ಕೋವಿಡೇತರ ರೋಗಿಗಳನ್ನು ಕೋವಿಡ್ ರೋಗಿಗಳೊಂದಿಗೆ ಇರಿಸಲಾದೀತೆ? ಅವರುಗಳ ಚಿಕಿತ್ಸೆಯ ಗತಿಯೇನು? ನಮ್ಮಲಿ ಸಾಕಷ್ಟು ವೈದ್ಯರು, ನರ್ಸಗಳು ಮತ್ತು ವೈದ್ಯಕೀಯ ಸಹಾಯಕ ಸಿಬ್ಬಂಧಿ ಇರುವರೆ?  ನಮ್ಮ ಕೊರೋನಾ ಸೇನಾನಿಗಳಿಗೆ ನಾವು ಸಾಕಷ್ಟು ಸುರಕ್ಷಾ ಸಲಕರಣೆಗಳನ್ನೊದಗಿಸಬಲ್ಲವೆ? ತಜ್ಞ ವೈದ್ಯರುಗಳನ್ನು ನಾವು ಹೊರದೇಶದಿಂದ ಕರೆಸಿಕೊಳ್ಳಬಲ್ಲವೆ? ವೈದ್ಯಕೀಯ, ನರ್ಸಿಂಗ್ ಮುಂತಾದ ವ್ಯಾಸಂಗಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಸೇವೆಗೆ ನಾವು ಬಳಸಿಕೊಳ್ಳಬಹುದೆ?'  ತಜ್ಞರುಗಳ ಈ ಪರಿಯ ಸವಾಲುಗಳು ಸರಕಾರದ ಕಣ್ಣಿಗೆ ಕೈ ಹಾಕಿ ಪ್ರಶ್ನಿಸುವಂತಿತ್ತು.   

ಅಂದು ೨೪-೦೩-೨೦೨೦.  ಪ್ರಧಾನಿ ಮೋದಿಯವರು ಅಂದು ರಾತ್ರಿ ೮ ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡುವರೆಂಬ ಸುದ್ದಿ ಎಲ್ಲಡೆ ಹರಡಿತ್ತು.  ಕಳೆದ ಐದು ದಿನಗಳಲ್ಲಿ ಎರಡೆನ ಬಾರಿ ಪ್ರಧಾನಿಯವರು ದೇಶದ ಜನತೆಯನ್ನುದ್ದೇಶಿಸಿ ಮಾತನಾಡುವ ತುರ್ತು ಅವಶ್ಯಕತೆ ಏನಿರಬಹುದೆಂಬುದನ್ನು ಹಲವರಾಗಲೇ ಊಹಿಸಿಯಾಗಿತ್ತು.  'ಲಾಕ್ ಡೌನ್  ಅಂತೂ ಖಚಿತ.  ಆದರೆ ಎಷ್ಟು ದಿನದ್ದು?' ಎಂಬ ಕುತೂಹಲ ಮಾತ್ರ ಉಳಿದಿತ್ತು. 

ಆಗ ಸಮಯ ೮ ಗಂಟೆಯಾಗಿತ್ತು.  ರಾಜು ಮತ್ತು ಅವರ ಮಗಳು ರೋಹಿಣಿ ತಮ್ಮ ಟಿ.ವಿ.ಯನ್ನು ತದೇಕ ಚಿತ್ತದಿಂದ ನೋಡುತ್ತಿದ್ದರು.  ಅಂತೆಯೆ ದೇಶದ ೧೩೦ ಕೋಟಿ ಜನತೆ,  ಪ್ರಧಾನಿ ಏನು ಹೇಳಬಹುದೆಂಬದನ್ನು ಕಾತುರದಿಂದ ಕಾಯುತ್ತಿತ್ತು.  ಧೃಢ ಸಂಕಲ್ಪದೊಂದಿಗೆ ಸಿದ್ಧರಾದಂತೆ ಕಂಡ ಪ್ರಧಾನಿ ಮೋದಿಯವರು, ಮಾರ್ಚ್ ೨೫ರಿಂದ ದೇಶದ್ಯಾಂತ ೨೧ ದಿನಗಳ ಲಾಕ್ಡೌನ್ ನಿರ್ಬಂಧವನ್ನು  ಘೋಶಿಸಿಯೇ ಬಿಟ್ಟಿದ್ದು ನೀರೀಕ್ಷೆಯಂತೆಯೇ  ಇದ್ದರೂ, ಅದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದು ಸುಳ್ಳಲ್ಲ.  ೨೧ ದಿನಗಳ ಕಾಲ ಜನಗಳು ಮನೆಯಿಂದ ಹೊರಬರುವಂತಿಲ್ಲ.  ಬಸ್ಸು, ರೈಲು, ವಿಮಾನಗಳೂ  ಸೇರಿದಂತೆ ಯಾವುದೇ  ವಾಹನಗಳ  ಸಂಚಾರವಿಲ್ಲ! ಸ್ಥ೦ಭಿಭೂತರಾದಂತೆ ಕಂಡ ಜನತೆಗೆ, ನಾಯಕರುಗಳಿಗೆ ಪ್ರತಿಕ್ರಿಯಿಸಲು ಕೊಂಚ ಸಮಯ ಬೇಕಾದಂತೆ ಅನಿಸಿದಂತೆ  ಎಲ್ಲಡೆ ಕಂಡು ಬಂತು.  

ಮಾರನೆಯ ದಿನದ ದಿನಪತ್ರಿಕೆಗಳು ಲಾಕ್ ಡೌನ್  ಘೋಷಣೆಯ ವರದಿಯನ್ನು ನೀಡಿದ್ದನ್ನು ಹೊರತು ಪಡಿಸಿದಂತೆ, ಮತ್ತ್ಯಾವ ವ್ಯಾಖ್ಯಾನವನ್ನು ಮಾಡುವ ಗೋಜಿಗೆ ಹೋಗಿರಲಿಲ್ಲ.  ವಿರೋಧ ಪಕ್ಷಗಳು ಕೂಡ ಪ್ರತಿಕ್ರಿಯಿಸುವ ಮುನ್ನ ಸ್ವಲ್ಪ ಕಾಯುವ ನೀತಿಯನ್ನು ಅನುಸರಿಸಿದಂತೆ ಕಂಡುಬಂತು. ಒಂದೆರಡು ದಿನಗಳನಂತರವೇ ಟೀಕೆ-ಟಿಪ್ಪಣಿಗಳು ಬರಲಾರಂಭಿಸಿದ್ದು.  

ಹಿರಿಯ ಅನುಭವಿ ರಾಜು ತಮ್ಮ ಮಗಳೊಂದಿಗೆ ಚರ್ಚಿಸುತ್ತಾ, ಲಾಕ್ ಡೌನ್ ಜಾರಿಯ ಉಪಯೋಗಗಳ ಪಟ್ಟಿ ನೀಡಲಾರಂಭಿಸಿದ್ದರು.  'ಅನುಮಾನಂ ಪೆದ್ದ ರೋಗಂ' ಎನ್ನುವ ತೆಲುಗಿನ ಗಾದೆಯಂತೆ ಅನಿಶ್ಚಿತತೆಯೆಂಬುದೊಂದು ದೊಡ್ಡ ರೋಗ.  . ' ಲಾಕ್ ಡೌನ್ ಜಾರಿಯಿಂದ ಅನಿಶ್ಚಿತತೆಯ ಸನ್ನಿವೇಶ ಅಂತ್ಯಗೊಂಡದ್ದು ಸಂತಸದ ವಿಷಯ.  ದೇಶಾದ್ಯಂತ ಲಾಕ್ ಡೌನ್ ವಿಧಿಸುವ ದೃಢ ನಿರ್ಧಾರ ಮಾಡಲು, ಪೂರಕವಾಗಿ ನೆರವಿಗೆ ಬಂದ ಹಲವು ಅಂಶಗಳ ಪಟ್ಟಿಯನ್ನು ನೀಡುತ್ತಾ ರಾಜು ಮಾತನಾಡಿದರು. 

-ಸತತ ೨೧ ದಿನಗಳ ಕಾಲದ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ನಿರ್ಧರಿಸುವಲ್ಲಿ , ಪೂರ್ಣ ಬಹುಮತ ಹೊಂದಿದ್ದು ಪ್ರಧಾನಿ ಮೋದಿಯವರಿಗೆ ವರದಾನವಾಗಿ ಬಂದಿತ್ತು.  ಇಂತಹ ಕಠಿಣ ನಿರ್ಧಾರವನ್ನು ದುರ್ಬಲವಾದ ಸಮ್ಮಿಶ್ರ ಸರಕಾರವೊಂದು ತೆಗೆದುಕೊಳ್ಳಲು ಸಾಧ್ಯವಿತ್ತೆ?

-ಭಾರತವೊಂದು  ರಾಜ್ಯಗಳ ಒಕ್ಕೂಟದ ವ್ಯವಸ್ಥೆಯಾಗಿದ್ದು (Federal system), ಕೇಂದ್ರ- ರಾಜ್ಯಗಳೊಂದಿಗಿನ ಸಂಬಂಧ ಸುಮಧುರವಾಗಿದ್ದುದು ಕೂಡ ಪೂರಕ ಅಂಶವೊಂದಾಗಿತ್ತು. ಬೆರೆಳೆಣಿಕೆಯಷ್ಟು ರಾಜ್ಯಗಳೊಂದಿಗಿನ ವೈಮನಸ್ಯಗಳನ್ನು  ಈ ವಿಷಯದಲ್ಲಿ ನಿಭಾಯಿಸುವ ವಿಶ್ವಾಸ ಕೇಂದ್ರ ಸರಕಾರಕ್ಕಿತ್ತು. 

-ದೇಶ ಆರ್ಥಿಕವಾಗಿ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಕಳೆದ ವರ್ಷ (೨೦೧೯) ದೇಶಾದ್ಯಂತ ಉತ್ತಮ ಮಳೆ-ಬೆಳೆಗಳಾಗಿದ್ದು, ದವಸ-ಧಾನ್ಯಗಳ ದಾಸ್ತಾನು ಸಮೃದ್ಧವಾಗಿತ್ತು. ಕಚ್ಚಾ ತೈಲದ ಬೆಲೆ ಅಗ್ಗವಾಗಿದ್ದು, ವಿದೇಶಿ ವಿನಿಮಯದ ಪರಿಸ್ಥಿತಿ ಅನುಕೂಲಕರವಾಗಿತ್ತು.  

-ಪದೇ-ಪದೇ ಕಾಡುವ ರಾಜ್ಯ ಸರಕಾರಗಳ ಚುನಾವಣೆಗಳು ದೂರವಿದ್ದದ್ದೂ, ಧೃಢ ನಿರ್ಧಾರ ಕೈಗೊಳ್ಳುವಲ್ಲಿ ಪೂರಕವಾಗಿತ್ತು.  ಮುಂದಿನ ಬಿಹಾರ ರಾಜ್ಯ ಚುನಾವಣೆಗೆ  ೨೦೨೦ರ ನವೆಂಬರ್ ವರೆಗಿನ ಕಾಲಾವಕಾಶವಿತ್ತು. 

-ಕೋವಿಡ್ ವೈರಾಣುವಿನ ತೀವ್ರತೆ, ಭಾರತದಂಥ ಉಷ್ಣ ವಲಯದ ದೇಶವನ್ನು ಅಷ್ಟಾಗಿ ಕಾಡದು ಎಂಬ ವರದಿಯೂ ನಮ್ಮ ದೇಶದ ವಿಶ್ವಾಸವನ್ನು ಹೆಚ್ಚಿಸಿತ್ತು.  ಯುವಕರೇ ಹೆಚ್ಚಾದ ಭಾರತದ ಜನತೆಯಲ್ಲಿ, ರೋಗ ನಿರೋಧಕ ಶಕ್ತಿ ಹೆಚ್ಚಿದೆ ಎಂಬುದು ತಜ್ಞರ ಅಭಿಪ್ರಾಯವಾಗಿತ್ತು.   

ತನ್ನಪ್ಪನ ವಾದಸರಣಿಗೆ ಮಗಳು ರೋಹಿಣಿ, ಒಂದಿಷ್ಟೂ ಸೊಪ್ಪು ಹಾಕಿದಂತೆ ಕಂಡುಬರಲಿಲ್ಲ.  'ಅಪ್ಪ ನೀವು ಗಂಭೀರವಾದ ಅಂಶಗಳನ್ನು ಮರೆಮಾಚಿಸುತ್ತಿದ್ದೀರಾ' ಎಂದ ರೋಹಿಣಿ, ತನ್ನ ಪಾಟಿ ಸವಾಲುಗಳೊಂದಿಗೆ ವಾದಕ್ಕೆ ನಿಂತಿದ್ದಳು.  

'೨೧ ದಿನಗಳ ಸುಧೀರ್ಘ ಲಾಕ್ ಡೌನ್ ವಿಧಿಸುವ ಮುನ್ನ ಪ್ರಧಾನಿಯವರು ರಾಜ್ಯ ಸರಕಾರದ ಮುಖ್ಯ ಮಂತ್ರಿಗಳ ಜೊತೆ ಏಕೆ ಚರ್ಚಿಸಲಿಲ್ಲ? ಒಕ್ಕೂಟ ವ್ಯವಸ್ಥೆಯ ಮೇಲಿನ ವಿಶ್ವಾಸದ ಉದ್ದುದ್ದ  ಭಾಷಣಗಳು ಪ್ರಧಾನಿಗಳ ಪಾಲಿಗೆ ಬಡಾಯಿ ಮಾತ್ರವಾಯಿತೆ? ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗಿನ ವೀಡಿಯೊ ಚರ್ಚೆ ಮಾತ್ರ ಸಾಕೆ? ದೇಶಾದ್ಯಂತ ಲಾಕ್ ಡೌನ್ ಹೇರುವ ಪರಮಾಧಿಕಾರ ಕೇಂದ್ರ ಸರಕಾರಕ್ಕಿದ್ದರೂ, ಆ ವ್ಯವಸ್ಥೆಯನ್ನೂ ಜಾರಿಗೊಳಿಸುವ ಜವಾಬ್ದಾರಿ ರಾಜ್ಯ ಸರಕಾರಗಳದ್ದಲವೇ? ಲಾಕ್ ಡೌನ್ ಘೋಷಣೆ ತರಾತುರಿಯಲ್ಲಾಯಿತಲ್ಲವೇ? ೨೦೧೬ರ ಅಪನಗದೀಕರಣದ ಎಡಬಿಡಂಗಿ ನಿರ್ಧಾರದಿಂದಾದ ಅನಾಹುತಗಳು ಮರೆತು ಹೋದವೆ? ಲಾಕ್ ಡೌನ್ ಘೋಷಣೆಗೆ ಮುಂಚೆಯೇ, ವಲಸೆ ಕಾರ್ಮಿಕರುಗಳಲ್ಲುಂಟಾದ ಆತಂಕಗಳು ಕೇಂದ್ರಕ್ಕೆ ಕಾಣಲಿಲ್ಲವೆ?  ಲಾಕ್ ಡೌನ್ ಪೂರ್ವದಲ್ಲೇ ಕೆಲಸಗಳನ್ನು ಕಳೆದುಕೊಂಡ, ಮುಂಬೈನಂತಹ ಮಹಾನಗರಗಳ ವಲಸೆ ಕಾರ್ಮಿಕರುಗಳು, ದೇಶದ ಪೂರ್ವ ಭಾಗದಲ್ಲಿರುವ ತಮ್ಮ-ತಮ್ಮ ಹಳ್ಳಿಗಳಗೆ ಪ್ರಯಾಣ ಬೆಳಸಲು ರೈಲುಗಳನ್ನು ಹತ್ತಲಾಗದೆ ಪರದಾಡಿದ್ದು ಸುಳ್ಳೆ? ಪ್ರಧಾನಿ ಮೋದಿಯವರಾಗಲಿ, ರಾಜ್ಯಗಳ ಮುಖ್ಯ ಮಂತ್ರಿಗಳಾಗಲಿ, ವಲಸೆ ಕಾರ್ಮಿಕರುಗಳ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಏಕೆ ಮುಂಜಾಗ್ರತೆ ವಹಿಸಲಿಲ್ಲ?' ಎಂದ ರೋಹಿಣಿ, ಉದ್ರಿಕ್ತಳಾಗಿದ್ದನ್ನು, ತಂದೆ ರಾಜುರವರು ಗಮನಿಸದಿರಲಿಲ್ಲ. 

'ಘಟನೆಗಳು ಘಟಿಸಿದನಂತರ ಜಾಣರಂತೆ ವಿಮರ್ಶಿಸುವುದು ಸುಲಭ.  ಸುಕೃತವೋ ಎಂಬಂತೆ ಕೋವಿಡ್ ಮಾರಿ, ನಮ್ಮ ದೇಶಕ್ಕೆ ತಡವಾಗಿ ಕಾಲಿಟ್ಟಿದೆ.  ಕೋವಿಡ್ ರೋಗಿಗಳ ಸಂಖ್ಯೆ ಕಮ್ಮಿ ಇದ್ದಾಗಲೇ ಲಾಕ್ ಡೌನ್ ಜಾರಿಗೊಳಿಸಿದ್ದೊಂದು ಜಾಣ್ಮೆಯ ನಡೆ' ಎಂದು ಅನುಭವಿ ಮಾತುಗಾರ ರಾಜು ತಮ್ಮ ಮಗಳಿಗೆ ಸಮಜಾಯಿಷಿ ನೀಡಿ ವಾದಕ್ಕೆ ತೆರೆ ಎಳೆದಿದ್ದರು.  

ಸಂಪೂರ್ಣ ಲಾಕ್ ಡೌನ್ ಸನ್ನಿವೇಶವನ್ನು ನಿಭಾಯಿಸುವುದು, ಪೊಲೀಸರಿಗಾಗಲಿ,                                  ಶ್ರೀಸಾಮಾನ್ಯರಿಗಾಗಲಿ ಹೊಸ ಅನುಭವವಾಗಿತ್ತು.  ಲಾಕ್ ಡೌನ್ ನಿಯಮಗಳನ್ನು ಸಾರ್ವಜನಿಕರು    ಗಾಳಿಗೆ ತೂರಿದ ಘಟನೆಗಳ ಸಂಖ್ಯೆ ಎಡಬಿಡದೆ ಸಾಗಿತ್ತು. ನಿರ್ಬಂಧ ಉಲ್ಲಂಘಿಸಿ ಸಂಚರಿಸುತ್ತಿದ್ದ    ದ್ವಿಚಕ್ರ  ಸವಾರರಿಗೆ  ಪೊಲೀಸರು ಲಾಠಿ ರುಚಿ ತೋರಿಸಿದ ವರದಿಗಳು ಮೇಲೆ-ಮೇಲೆ ಬರಲಾರಂಭಿಸಿದ್ದವು.  ಎಲ್ಲೆ ಮೀರಿ ಹೊರಬಂದ ಜನಗಳಿಗೆ ಪೊಲೀಸರು 'ಉಟ್-ಬೈಟ್'ನಂಥ ಸಣ್ಣ ಶಿಕ್ಷೆ ವಿಧಿಸಿ, ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಗಳ ವರದಿಯೂ ಮಾಧ್ಯಮಗಳಲ್ಲಿ ಸುಳಿದಾಡುತ್ತಿದ್ದವು. ಇವುಗಳ ನಡುವೆ ಕೆಲಸ ಕಳೆದುಕೊಂಡು, ಕೈಯಲ್ಲಿ ಕಾಸಿಲ್ಲದಂತಾದ  ವಲಸೆ ಕಾರ್ಮಿಕರ ನೋವು ನೋಡುವವರ ಕರುಳು  ಹಿಂಡುವಂತಿತ್ತು.  ಮುಂದೇನು ಎಂದು ತೋಚದೆ ದಿಕ್ಕೆಟ್ಟ ಅವರುಗಳು ತಮ್ಮ ಸಮಾನುಗಳನ್ನು ಹೊತ್ತು, ಮಡದಿ-ಮಕ್ಕಳುಗಳೊಡನೆ, ಸಾವಿರಾರು ಕಿಲೋಮೀಟರ್ ದೂರದ ತಮ್ಮ -ತಮ್ಮ ಸ್ವಂತ ಊರುಗಳಿಗೆ ನಡೆಯುತ್ತಾ ಪ್ರಯಾಣ ಬೆಳಸಿದ್ದು ಎಲ್ಲರನ್ನೂ ದಿಗ್ಭ್ರಾಂತರನ್ನಾಗಿಸಿತ್ತು. 
***

ಅಂದು ೨೦೨೦ರ ಏಪ್ರಿಲ್ ೩ರ ದಿನ.  ಪ್ರಧಾನಿಯವರು ಮತ್ತೊಮ್ಮೆ ದೇಶವನ್ನುದ್ದೇಶಿಸಿ ಭಾಷಣ ಮಾಡುವವರಿದ್ದರು.  ಎಂದಿನಂತೆ ರಾಜು ಮತ್ತು ರೋಹಿಣಿ ತಮ್ಮ ಮನೆಯ ಟಿ.ವಿ.ಯ ಮುಂದೆ ಕುಳಿತಿದ್ದರು.  ಈ ಬಾರಿ ಪ್ರಧಾನಿಯವರದ್ದು ವೀಡಿಯೊ ಸಂದೇಶ ಮಾತ್ರವಾಗಿತ್ತು.  'ಲಾಕ್ ಡೌನ್ ಪ್ರಯುಕ್ತ ನಾವೆಲ್ಲಾ ನಮ್ಮ-ನಮ್ಮ ಮನೆಗಳಲ್ಲೇ ಕಾಲ ಕಳೆಯುವಂತಾದರೂ, ನಮ್ಮ ೧೩೦ ಕೋಟಿ ಬಾಂಧವರು ನಮ್ಮೊಡನಿದ್ದಾರೆಂಬುದೇ, ನಮ್ಮೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ. ನಾಳಿನ ಭಾನುವಾರ, ಅಂದರೆ ಏಪ್ರಿಲ್ ೫ರ ರಾತ್ರಿ ೯.೦೦ ಗಂಟೆಗೆ ತಮ-ತಮ್ಮ ಮನೆಯ ಎಲ್ಲ ದೀಪಗಳನ್ನಾರಿಸಿ, ಹೊರಗೆ ಬನ್ನಿ. ೯ ನಿಮಿಷಗಳ ಕಾಲ ದೀಪಗಳನ್ನು ಬೆಳಗಿ, ಮೊ೦ಬತ್ತಿಗಳನ್ನು ಹಚ್ಚಿ, ಟಾರ್ಚ್ಗಳನ್ನು ಬೆಳಗಿಸಿ, ಮೊಬೈಲ್ ದೀವಿಗೆಗಳನ್ನು ಬೆಳಗಿ. ಕೋವಿಡ್ ಹರಡಿರುವ ಅಂಧಕಾರದಿಂದ, ಬೆಳಕಿನ ಕಡೆಗೆ ಪಯಣಿಸುವ ಸಾಂಕೇತಿಕತೆಯನ್ನು ನಮ್ಮ ದೀಪಗಳು ಸಾರಲಿ. ಜನರುಗಳು ಒಂದು ಕಡೆ ಗುಂಪುಗೂಡುವುದಾಗಲಿ, ಮೆರವಣಿಗೆಯಲ್ಲಿ ಸಾಗುವುದಾಗಲಿ ಬೇಡ' ಎಂಬುದು ಪ್ರಧಾನಿಗಳ ಅಂದಿನ ಸಂದೇಶದ ಸಾರವಾಗಿತ್ತು.  ೨೧ ದಿನಗಳ ಸತತ ಲಾಕ್ ಡೌನ್ ನಡುವಿನ  ಈ ಬೆಳಕಿನ ಕಾರ್ಯಕ್ರಮ, ಜನತೆಯ ಉಲ್ಲಾಸಕ್ಕೊಂದು ಪ್ರೇರಣೆಯನ್ನು ನೀಡಲೆಂಬುದು ಪ್ರಧಾನಿಗಳ ಉದ್ದೇಶವೆಂಬುದು ಹಲವರ ವ್ಯಾಖ್ಯಾನವಾಗಿತ್ತು.  

ರಾಜುರವರೇನೋ ಬೆಳಕಿನ ಕಾರ್ಯಕ್ರಮದ ಬಗ್ಗೆ ಪುಳಕಿತರಾಗಿದ್ದರು. ವಿಚಾರವಾದಿಯಾಗಿದ್ದ  ಮಗಳು ರೋಹಿಣಿಯ ಟೀಕಾಸ್ತ್ರಕ್ಕೀಗ ಹೊಸದೊಂದು ಮೊನಚು ಲಭಿಸಿತ್ತು.  ಜನರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸದೆ, ಕೆಲಸವಿಲ್ಲದ ಕೈಗಳಿಗೆ ಸಹಾಯ ಹಸ್ತ ನೀಡದೆ, ಮೋದಿಜಿ ಥಳುಕಿನ ಮಾರ್ಗವನ್ನು ಹಿಡಿದಿರುವುದು ಸರಿಯೆ, ಎಂಬುದು ವಿರೋಧ ಪಕ್ಷಗಳ ಟೀಕೆಯಾಗಿತ್ತು. ಏಪ್ರಿಲ್ ೬ರಂದು, ಪ್ರಧಾನಿಗಳ ಬಿ.ಜೆ.ಪಿ. ಪಕ್ಷ ಉದಯಿಸಿದ ದಿನ.  ಒಂದು ದಿನ ಮುಂಚೆಯೇ ಆ ಸಮಾರಂಭಾಚರಣೆಗೆ ಮೋದಿಜಿ ಕರೆ ನೀಡಿದ್ದಾರೆಂಬುದು ಕೆಲವು ವಿರೋಧಿ ನಾಯಕರುಗಳ ಕುಚೋದ್ಯವಾಗಿತ್ತು. 

ದೇಶಾದ್ಯಂತ ಎಲ್ಲ ದೀಪಗಳನ್ನು ಒಮ್ಮೆಲೇ ಆರಿಸಿದರೆ, ವಿದ್ಯುತ್ ಬಳಕೆಯ ತೀವ್ರತೆ ಧಿಡೀರನೆ ಕುಸಿದು, ವಿದ್ಯುತ್ ಸರಬುರಾಜಿನ ವ್ಯತ್ಯಯ ಉಂಟಾಗಬಹುದೆಂಬುದು ಹಲವು ತಜ್ಞರುಗಳ ಆತಂಕಕ್ಕೆ ಕಾರಣವಾಗಿತ್ತು.  'ದೀಪಗಳನ್ನಾರಿಸಿ, ಆದರೆ ಫ್ಯಾನ್ಗಳು-ಫ್ರಿಡ್ಜ್ ಗಳನ್ನು ಆರಿಸಬೇಡಿ.  ಆಗ ವಿದ್ಯುತ್ತಿನ  ತೀವ್ರತೆ ಒಮ್ಮೆಲೇ ಕುಸಿಯದು, ಸರಬರಾಜಿನ ವ್ಯತ್ಯಯ ಆಗದೆಂಬುದು,' ವಿದ್ಯುತ್ ಇಲಾಖೆಯ ಅಧಿಕಾರಿಗಳ ಸಮಜಾಯಿಷಿಯಾಗಿತ್ತು.   

ದೀಪಚಾರಣೆಯ ಹಿಂದಿನ ಸಂಜೆ, ಟೀಕೆ-ಟಿಪ್ಪಣಿಗಳಿಂದ ಧೃತಿಗೆಡದ ಪ್ರಧಾನಿ ಮೋದಿಜಿ, ತಮ್ಮ ಮಾರ್ಗದರ್ಶಿ ಹಾಗು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯೀರವರು, ದೀಪ ಬೆಳಗುವುದರ ಔಚಿತ್ಯವನ್ನು ಬಿಂಬಿಸಿ ಬರೆದ ಕವನವೊಂದನ್ನು ಉಲ್ಲೇಖಿಸಿದರು.  ಆ ಕವನದ ಸಾಲುಗಳು ಹೀಗಿತ್ತು.  

ಆವೋ ಫಿರ್ಸೆ ದಿಯಾ ಜಲಾಯೆ 
(ಮೂಲ: ಹಿಂದೀ ಭಾಷೆಯಲ್ಲಿ)

ಆವೋ ಫಿರ್ಸೆ ದಿಯಾ ಜಲಾಯೆ 
ಭರಿ ದುಪೆಹೆರಿಮೆ ಅಂಧಿಯಾರ 
ಸೂರಜ್ ಪರ್ಚಾಯಿ ಸೆ ಹಾರಾ  
ಅಂತರ್ತಮ್ ಕ ನೇಹ್ ನಿಚೋಡೆ 
ಬುಜಿ  ಹುಈ  ಬಾತೀ  ಸುಲಗಯೆ 
ಆವೋ ಫಿರ್ಸೆ ದಿಯಾ ಜಲಾಯೆ 

ಹಮ್ ಪಡಾವ್ ಕೋ ಸಂಝೆ ಮಂಜಿಲ್ 
ಲಕ್ಷ್ಯ ಹುವಾ ಆಂಖೋ ಸೆ ಒಝಾಲ್ 
ವರ್ತಮಾನ ಕೆ ಮೋಹಝಾಲ್ ಮೇ 
ಆನೇ ವಾಲಾ ಕಲ್ ನ ಭುಲಾಯೆ 
ಆವೋ ಫಿರ್ಸೆ ದಿಯಾ ಜಾಲಾಯೆ 

ಆಹುತಿ ಬಾಕಿ ಯಜ್ಞ ಅಧುರಾ 
ಅಪನೋ ಕೆ ವಿಘ್ನೋ ನೇ ಘೇರಾ 
ಅಂತಿಮ್ ಜಯ್ ಕೋ ವಜ್ರ ಬನಾನೆ  
ನವ್ ದಧೀಚಿ ಹಡ್ಡಿಯ ಗಲಯೆ 
ಆವ್ ಫಿರ್ಸೆ ದಿಯಾ ಜಲಾಯ
-೦-೦-೦-

 ದೀಪ ಬೆಳಗೋಣ ಬನ್ನಿ 
(ಕನ್ನಡ ರೂಪಾಂತರ: 
ಲಕ್ಷ್ಮೀನಾರಾಯಣ ಕೆ.  )

ದಿನದ ನಡುವೆ ಕವಿದ ಕತ್ತಲ
ಸೂರ್ಯನ ಮುಸುಕಿದ ನೆರಳ ಹರಿಸಲು 
ಅಂತರತಮದ ತೈಲವನೆರೆದು  
ಆರಿದ ಬತ್ತಿಯ ಮತ್ತೆ ಹಚ್ಚಿ 
ದೀಪ ಬೆಳಗೋಣ ಬನ್ನಿ 

ನಡು ದಾರಿಯನೆ ಗುರಿಯೆಂದೆಣಿಸಿ 
ಮರೆಯಾಯಿತು ಗುರಿ ಬಹುದೂರ
ಇಂದಿನ ಸುಖದ ಮೋಹಕೆ ಸಿಲುಕದೆ  
ಸುಂದರ ನಾಳಿನ ಬದುಕನು ಬೆಳಗಿಸೆ 
ದೀಪ ಬೆಳಗೋಣ ಬನ್ನಿ 


ನಮ್ಮವರೊಡ್ಡಿದ ವಿಘ್ನವ ಸರಿಸಿ  
ಆಹುತಿ ನೀಡದೆ ಯಜ್ಞ ಮುಗಿಯದು  
ನವ ದಧೀಚಿಗಳ ಮೂಳೆಯ ಬಳಸಿ 
ಅಂತಿಮ ಜಯವ ತಪ್ಪದೆ ಗಳಿಸಲು 
ದೀಪ ಬೆಳಗೋಣ ಬನ್ನಿ 

(ಗಮನಿಸಿ:
೧) ರಾಕ್ಷರನ್ನು ಸಂಹರಿಸಲು ಬೇಕಾದ ವಜ್ರಾಯುಧವನ್ನು ಸಿದ್ಧಪಡಿಸಲು, ತಮ್ಮ ಬಲಶಾಲಿ ಬೆನ್ನು ಮೂಳೆಯನ್ನೇ ದೇವೇಂದ್ರನಿಗೆ ದಾನ ಮಾಡಿದ ಮಹಾತ್ಯಾಗಿಯೇ ಮಹರ್ಷಿ ದಧೀಚಿ .  

೨) ನವ ಯುವಕರನ್ನು ನವ ದಧೀಚಿಗಳೆಂದು ಕವಿ ಬಣ್ಣಿಸಿದ್ದಾರೆ.  ಅಂತಿಮ ಜಯಗಳಿಸಲು ನಮ್ಮ ಯುವಕರು ನೀಡಬೇಕಾದ  ಪರಿಶ್ರಮದ ಕಾಣಿಕೆಯನ್ನು, ದಧೀಚಿಗಳ ತ್ಯಾಗಕ್ಕೆ ಕವಿ ಹೋಲಿಸಿದ್ದಾರೆ. 

***

'ವಾಜಪೇಯೀಯವರನ್ನು ಟಿ.ವಿ.ಯಲ್ಲಿ ನೋಡಿದ ನೆನಪು ಅಸ್ಪಷ್ಟವಾಗಿದೆ. ಅವರು ಮಾತುಗಳನ್ನು  ಕೇಳಿದ ನೆನಪಿಲ್ಲ. ಈ ಕವನವನ್ನು ಅವರು ರಚಿಸಿದ್ದೆ? ಯಾವ ಸಂದರ್ಭದಲ್ಲಿ ರಚಿಸಿದ್ದರು?' ಎಂಬುದು ಕವನವನ್ನು ಕೇಳಿದ ರೋಹಿಣಿಯ ಪ್ರತಿಕ್ರಿಯೆಯಾಗಿತ್ತು. ಮಗಳ ಪ್ರಶ್ನೆಯಿಂದ ಉತ್ತೇಜಿತರಾದ  ರಾಜುರವರೀಗ ವಾಜಪೇಯೀರವರ ಕವಿತೆಯ ಸಂದೇಶ ಮತ್ತು ಅದರ ಪ್ರಸ್ತುತತೆಯನ್ನು  ವಿವರಿಸಲು ಸನ್ನದ್ಧರಾಗಿದ್ದರು.  'ವಾಜಪೇಯೀರವರು ನಮ್ಮ ಪ್ರಧಾನಿಯಾಗಿದ್ದರು. ಅವರೊಬ್ಬ ಉತ್ತಮ ವಾಗ್ಮಿಯೂ ಹಾಗೂ ಕವಿಯೂ ಆಗಿದ್ದರು. "ವಾಜಪೇಯೀರವರು ರಾಜಕಾರಣಕ್ಕೆ ಕಾಲಿಟ್ಟಿದ್ದರಿಂದ ನಾವೊಬ್ಬ ಶ್ರೇಷ್ಠ ಕವಿಯನ್ನು ಕಳೆದುಕೊಂಡೆವು" ಎಂಬುದು ಅವರ ಹಲವು ಸಮಕಾಲೀನರ ಕೊರಗಾಗಿತ್ತು. ಧೀರ್ಘಾವಧಿಯ ವಿರೋಧ ಪಕ್ಷದ ನಾಯಕರು ಹಾಗೂ ನಂತರ ಪ್ರಧಾನಿಗಳೂ ಆಗಿದ್ದ ವಾಜಪೇಯೀರವರು, ತಮ್ಮ ಬಿಡುವಿಲ್ಲದ ಕಾರ್ಯಭಾರಗಳ ನಡುವೆಯೂ ತಮ್ಮ ಸಾಹಿತ್ಯ ಕೃಷಿಯನ್ನು ನಿಲ್ಲಿಸಿದವರಲ್ಲ.  ಅವರ  "ದೀಪ ಬೆಳಗೋಣ ಬನ್ನಿ"  ನಮ್ಮ ದೇಶದ ಯುವ ಜನಾಂಗವನ್ನುದ್ದೇಶಿಸಿ ರಚಿಸಿದ ಕವನ.  ಈ ಕವನದಲ್ಲಿ ದೇಶದ ಯುವಕರ ಪರಿಸ್ಥಿತಿಯನ್ನು  ಮೋಡ ಮುಸುಕಿದ ಮಧ್ಯಾಹ್ನದ ಸೂರ್ಯನಿಗೆ ಹೋಲಿಸಲಾಗಿದೆ. ಆದರೆ ನಮ್ಮ ಯುವಕರು ಚೈತನ್ಯಶೀಲರು ಹಾಗೂ ಉತ್ಸಾಹಿಗಳು. ಇಂದಿನ ಅಡೆ-ತಡೆಗಳಿಂದ ಅವರುಗಳು ಧೃತಿಗೆಡಬಾರದು. ನಾಳಿನ ಸುಂದರ ಬದುಕನ್ನು ಕಟ್ಟಿಕೊಳ್ಳಲು, "ಮತ್ತೊಮ್ಮೆ ದೀಪ ಬೆಳಗುವ" ಪ್ರಕ್ರಿಯೆ ಅವರುಗಳ ಹೋರಾಟಕ್ಕೆ ನಾಂದಿಯಾಗಬೇಕು. ನಮ್ಮ ಯುವಕರ ಆ ಹೋರಾಟವನ್ನೇ ಕವಿ "ಯಜ್ಞ"ವೆಂದು ಬಣ್ಣಿಸಿದ್ದಾರೆ.  ತಪಸ್ವಿ ದಧೀಚಿಯವರಂತೆ ನಮ್ಮ ಯುವಕರು ತ್ಯಾಗಕ್ಕೆ ಸಿದ್ಧರಾಗಿ, ತಮ್ಮ ತನು-ಮನ-ಧನಗಳನ್ನು ಸಮರ್ಪಿಸಿ ಜಯಶೀಲರಾಗಬೇಕು ಎಂಬುದು ಕವಿಯ ಆಶಯ. ನಮ್ಮ ಪ್ರಧಾನಿಯವರು      ಸಂದರ್ಭೋಚಿತವಾಗಿ  ಈ  ಕವಿತೆಯನ್ನುಲ್ಲೇಖಿಸಿ, "ದೀಪ ಬೆಳಗು"ವುದರ ಮುಖಾಂತರ ಕೊರೋನಾ ವಿರುದ್ಧದ ಹೋರಾಟಕ್ಕೆ ಸಜ್ಜಾಗುವಂತೆ ಜನತೆಗೆ ಕರೆ ನೀಡಿದ್ದಾರೆ' ಎಂದು ತಮ್ಮ ವ್ಯಾಖ್ಯಾನವನ್ನು  ಮುಗಿಸಿದ ರಾಜುರವರು ಉಬ್ಬಿ ಹೋಗಿದ್ದರು.  ಕವಿತೆಯ ಸಂದೇಶಕ್ಕೆ ಮತ್ತು ಔಚಿತ್ಯಕ್ಕೆ ಮಗಳು ರೋಹಿಣಿ ತಲೆದೂಗಿದ್ದು, ತಂದೆಯಾದ ರಾಜುರವರಿಗೆ ಸಮಾಧಾನ ತಂದಿತ್ತು. 

ಅಷ್ಟು ಹೊತ್ತಿಗೆ ೦೫-೦೪-೨೦೨೦ರ ಭಾನುವಾರದ ರಾತ್ರಿ ೯ರ ಸಮಯವಾಗಿತ್ತು. ರಸ್ತೆಯ ಎಲ್ಲಾ ಜನರುಗಳು ತಮ್ಮ ತಮ್ಮ ಮನೆಗಳ ವಿದ್ಯುತ್  ದೀಪಗಳನ್ನಾರಿಸಿ ಹೊರಬಂದಿದ್ದರು. ರೋಹಿಣಿ ಕೂಡ ತನ್ನ ತಂದೆಯೊಂದಿಗೆ ತನ್ನ ಮನೆಯ ಮುಂದೆ ಬಂದು ದೀಪವನ್ನು ಬೆಳಗಿದಳು. ಕೆಲವರು ಶಂಖನಾದ ಮಾಡಿ, ಪಟಾಕಿಗಳನ್ನು ಸಿಡಿಸಿದರು.  ಜನಗಳಲ್ಲಿ ದೀಪಾವಳಿ ಹಬ್ಬವನ್ನು ಮತ್ತೊಮ್ಮೆ ಆಚರಿಸಿದ ಸಂಭ್ರಮ ಕಂಡುಬಂದಿತ್ತು.  ಅಪ್ಪಟ ಅಸ್ಸಾಮಿಯರಂತೆ 'ಮುಂದು' (ಪಂಚೆ)ವನುಟ್ಟು, 'ಗಮುಸ' (ಶಲ್ಯ)ವನ್ನು ಹೊದ್ದ ಪ್ರಧಾನಿ ಮೋದಿಯವರು ತಮ್ಮ ಮನೆಯ ಮುಂದೆ ದೀಪ ಬೆಳಗಿ ಎಲ್ಲರ ಗಮನ ಸೆಳೆದಿದ್ದರು.  ರಾಷ್ಟ್ರಾದ್ಯಂತ ಮನೆ ಮನೆಗಳಲ್ಲಿ ಜರುಗಿದ ದೀಪ ಬೆಳಗುವ ಸಮಾರಂಭ, ಕೊರೋನಾ ವಿರುದ್ಧದ ಧೀರ್ಘ ಹೋರಾಟಕ್ಕೆ ದೇಶದ ಜನತೆ ನಾಂದಿ ಹಾಡಿದಂತಿತ್ತು. 
***