Sunday, 17 August 2025

ಕವನೋತ್ಸವ

                                                                     ಕವನೋತ್ಸವ  

(ರಚನೆಲಕ್ಷ್ಮೀನಾರಾಯಣ ಕೆ.

ನಿವೃತ್ತ ಪ್ರಾಧ್ಯಾಪಕರು, ಬೆಂಗಳೂರು 

Klakshminarayana1956@rediffmail.com

Mobile: 98455 62603)

***

ಕವನೋತ್ಸವ – 1

ಯಾರಿವರು?

***

'ಮಸಣದ ಚಲುವೊಂದಿಗೆಪ್ರಣಯವಾಯ್ತೆ?

ಮಸಣದ ನೀರವತೆ ದಮನಿತರ

ದನಿಗೆತಾ ಸ್ಫೂರ್ತಿಯಾಯ್ತೆ?

 

'ನಾ ಮೂಳೆನಾ ಇಂಗೆ ಇರಲ್ಲಾ

ಕೂಗ್ತೀನಿಸಿಡಿತೀನಿ,' ಎಂಬಿವನ ದನಿ

ಬಂಡಾಯದ ಕೂಗಾಯ್ತೆ?

 

'ತ್ರಾಣಪ್ರಾಣ ಎಳ್ಡೂ ಇಲ್ದೆ

ತ್ವಡೆ ನಡ್ಗಿ ಸತ್ತೋಗೋರಾ,' ಎಂಬೀ ಕೂಗು

ನಮ್ಮಾಳೋರ ಬಡಿದೆಬ್ಬಿಸಿತೇ?

 

 

'ಟಾಟಾಬಿರ್ಲಾ ಜೋಬಿಗೆ ಬಂತು

ನಲವತ್ತೇಳರ ಸ್ವಾತಂತ್ರ್ಯಎಂದವನ ನಾದ

ಸಾಮಾಜಿಕ ನ್ಯಾಯಕ್ಕೆ ತಾ ನಾಂದಿಯಾಯ್ತೆ?

 

ಶೋಷಿತರ ದನಿಯಿಂದು ಸದ್ದಡಗಿಸಿತೆ?

ದಿವ್ಯ ಚೇತನಕೇತರ ಸಾವು?

ಸ್ಥಾವರಕಳಿವುಂಟುಜಂಗಮಕ್ಕುಂಟೇ?

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಬಂಡಾಯ ಕವಿ ಸಿದ್ಧಲಿಂಗಯ್ಯ)

******

 

ಕವನೋತ್ಸವ – 2

ಯಾರಿವರು?

***

ಮೂರ್ತಿ ಚಿಕ್ಕದಾದರೂ 

ಕೀರ್ತಿ ದೊಡ್ಡದಂತೆ 

ಮೊದಲಾಟದಲ್ಲೇ ಸಿಡಿಯಿತಂತೆ 

ಭರ್ಜರಿ ಚೊಚ್ಚಲ ಶತಕ 

ಬ್ಯಾಟಿಂಗ್ ಕಲೆಯ ನಿಪುಣನೀತ 

ನೂರೇರಿಸಿದಾಗೆಲ್ಲ ನಾವ್  ಸೋತಿಲ್ಲವಂತೆ 

'ವಿಶ್ವ'ಮಾನ್ಯ ಕನ್ನಡಿಗನೀತ 

ಸಜ್ಜನ ಕ್ರಿಕೆಟಿಗನಂತೆ 

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಜಿ.ಆರ್ವಿಶ್ವನಾಥ್) 

******

ಕವನೋತ್ಸವ - 3

ಯಾರಿವರು?

***

ಚಾಮಯ್ಯ ಮೇಷ್ಟ್ರ ಪ್ರೀತಿಯೇ 

ಶಿಷ್ಯನಿಗೆ ಮುಳುವಾಯ್ತೆ?

 

ಸದಾಶಿವರಾಯರ ಅತಿಯಕ್ಕರೆಯೂ 

ಮಿನುಗುತಾರೆಯ ಮೆರೆಸದಾಯ್ತೆ?

ದುರಂತಗಳಿಗೆ ಮುನ್ನುಡಿ ಬರೆವುದೆ 

ಇವರ ಪಾತ್ರವಾಯ್ತೆ?

 

'ನಮ್ಮ ಮಕ್ಕಳೀ' ಪಾತ್ರಧಾರಿ

'ಸತ್ಯಮಾರ್ಗದಿ ನಡೆವ ಶಕ್ತಿಬೇಡಿದರೇಕೆ?

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಕೆ.ಎಸ್.ಅಶ್ವತ್ಥ್) 

 

 

ಕವನೋತ್ಸವ - 4

ಯಾರಿವರು?

***

ಹೆಸರಲಿ ಶಾಂತನಾದರೂ 

ಹೋರಾಟದ ಹಠವಂತನೆ?

ಕಾಗೋಡ ಗೂಡಿಗೆ ಲೋಹಿಯಾರ 

ಕರೆತಂದ ಭಗೀರಥನಿವನೆ?

'ಅವಸ್ಥೆ' ಶೋಷಿತನಿವ 

ಅರಸರ ಭೂಸುಧಾರಣೆಗೆ ಪ್ರೇರಣೆಯಾದನೆ?

ಏನವಸರವಿತ್ತೋಬೇಗ ತೆರಳಿ 

ಉತ್ಸಾಹಿಗಳೇಕೆ ಅಲ್ಪಾಯುಗಳೆಂದೆಮ್ಮ ಕಾಡಿದನೆ?

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರ: ಶಾಂತವೇರಿ ಗೋಪಾಲ ಗೌಡ)

***

 

 

 

 

 

 

 

ಕವನೋತ್ಸವ - 5

ಯಾರಿವರು?

***

ವಿಷವುಂಡವನ ಬೀಡ ನರ್ತಕಿಗೆ 

ಬೆಂಗಳೂರ ಬಿರುದೇಕೆ?

ಗೆಜ್ಜೆಪೂಜೆಗೆ ಕೊರಳೊಡ್ಡಿದರುನೃತ್ಯಸಂಗೀತ 

ಸಾಹಿತ್ಯಗಳ  ಕರುಳಲೇ  ಪಡೆದಳೆ?

ತನುಮನಧನಗಳ ಗಾನಗುರು ತ್ಯಾಗಯ್ಯಗರ್ಪಿಸಿ 

 ಅವರರಾಧನೆಗೆ ನಾಂದಿ ಹಾಡಿದಳೆ?

ಕೀಳೆಂಬ ಹಣೆಪಟ್ಟಿ ಹೊತ್ತು ಸೆಣಸಿ  

ಲೀನಳಾದಳಲ್ಲ ಗುರು ಚರಣದೊಳಗೆ!

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಬೆಂಗಳೂರು ನಾಗರತ್ನಮ್ಮ)

******

 

ಕವನೋತ್ಸವ - 6

ಯಾರಿವರು?

***

ಕೃಷ್ಣರಾಜರ ಮುರಳಿ ಕರೆಯಿತೆ 

ದೂರ ತೀರಕೆ ನಿನ್ನನು?

ಸಪ್ತ ಸಾಗರದಾಚೆ ಹಾರಿ 

ಸೇರಿದೆಯಾ ಕರುನಾಡನು?

 

ಹೂವ ಹಾಸಿಗೆ ಹಸಿರು ಹೊದಿಕೆ 

ಮರರೆಂಬಗಳ ಚುಂಬನ 

'ಕೆಂಪು ತೋಟ' ಬೇಲಿಯೊಳಗೆ 

ನಿರ್ಮಿಸಿದೆ ಸ್ವರ್ಗವೊಂದನ!

 

ಬಿಳಿಯ ಸೀರೆಯನುಟ್ಟು ಬಳುಕುವ  

ಜಲಕನ್ನಿಕೆಯರ ನರ್ತನ 

ಸೆಳೆವ ಬೃಂದಾವನವ ಕಟ್ಟಿ 

ಸಿಂಗರಿಸಿದೆ ಕಾವೇರಿ ಅಣೆಕಟ್ಟನ!

 

ಕರ್ಮಭೂಮಿಯಲೇ ಮಣ್ಣಾದ 

ಸಾರ್ಥಕವು ನಿನ್ನೀ ಜೀವನ 

ಹಸಿರು ಸಂದೇಶದ ನಿನ್ನ 

ನೆನೆಯುತಿದೆ ಕನ್ನಡ ವನಮನ 

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಜಿ.ಎಚ್ಕ್ರುಮ್ಬಿಗಲ್)

******

 

 

ಕವನೋತ್ಸವ - 7

ಯಾರಿವರು?

***

ಮಧುರ ಕಂಠದ ಪುಟ್ಟ ಕೋಗಿಲೆಗೆ 

ಕುತ್ತಾಯ್ತೆ ಕೊರಳ ನೋವೊಂದು?

ಗಡುಸಾಯ್ತು ಗಾನಗಂಗೆಯ ಸಿರಿಕಂಠವಂದು!

 

ಸೋಲೊಪ್ಪುವುದುಂಟೆ 

ಗಂಡುಮೆಟ್ಟಿನ ನಾಡ ದಿಟ್ಟ ಮಹಿಳೆ?

ಒಲಿಸಿಕೊಂಡಳಲ್ಲಾ ಗಡುಸು ದನಿಗೆ ಭಾವದ ಸೆಲೆ!

 

ಸಣ್ಣ ಝರಿಯೊಂದು ಬೆಟ್ಟಗುಡ್ಡಗಳ ಬಳಸಿ 

ಮೈತುಂಬಿ ಭೋರ್ಗರೆದು ನದಿಯಾಗುವಂತೀ 

ಗಂಗೆಯ ಗಾನಶ್ರುತಿ 

 

ಭೀಮಬಸವಮಲ್ಲಿಕಾರ್ಜುನರ ಸೆಣಸಿ 

ಗೆದ್ದು ಬೀಗಿದಳಲ್ಲಾ ಹೆಣ್ತನವ ಮೆರೆಸಿ 

ಪದ್ಮವಿಭೂಷಣೆಯಾಗಿ ಕರುನಾಡ ಗೆಲಿಸಿ 

***

(ರಚನೆಲಕ್ಷ್ಮೀನಾರಾಯಣ ಕೆ.) 

(ಉತ್ತರಗಂಗೂಬಾಯ್ ಹಾನಗಲ್)

******

ಕವನೋತ್ಸವ - 8

ಯಾರಿವರು?

***

ಗೋಕಾಕದ ಜಲಧಾರ 

ಕರುನಾಡ ನಯಾಗರ 

ಅಲ್ಲಿ ಜನಿಸಿತೊಂದು 

ಗಣಿತದ ಧ್ರುವತಾರ 

 

ಬೆಳಗಿತದು  

ಗಂಡುಮೆಟ್ಟಿನ ನಾಡ  

ವಿದ್ಯಾಲಯಗಳ 

ಪರಿಕರ 

 

ದೂರದೈದು ನದಿಗಳ ಬೀಡ  

ಆಳಿದ್ದು ಅದರ ಶಿಖರ 

ಅದರ  ಸ್ಮರಣೆಯೆ 

ನಮಗೆ ಶ್ರೀಕಾರ 

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಡಿ.ಸಿ.ಪಾವಟೆ)

******

 

ಕವನೋತ್ಸವ – 9

ಯಾರಿವರು?

***

ಹೂವು ಹೊರಳುವವು ಸೂರ್ಯನ ಕಡೆಗೆ

ನಮ್ಮ ದಾರಿ  ಭಾವ ಜೀವಿಯವರೆಗೆ

ಗದ್ಯದ ಒಡಲಿಗೆಪದ್ಯದ ಕಡಲಿಗೆ

ಮುಳುಗಿದಂತೆದಿನ ಬೆಳಗಿದಂತೆ

ಹೊರಬರುವನು ರವಿಯ ಹಾಗೆ

 

'ಮಣ್ಣಿನ ಮೆರವಣಿಗೆ'ಯಲಿ

 ಕರಗಿಸಿ ಬಿಡವನು

ಎಲ್ಲ ಬಗೆಯ ಸರಕು:

ಸಮನ್ವಯದ ಕವಿಯು

ಕೂಡಿಸಿ ಬಾಳ ತೊಡಕು

 

'ಜೀವ ಧ್ವನಿಕವನಗಳಿಗೂ ಮುದ

ಭಾವಪೂರ್ಣ ಗಾನಕೂ ಒಂದೇ ಹದ,

ಕವಿ ಹೃದಯದೊಳೇನು ನಡೆವುದೋ

'ಚೆಲ್ವವೀರನವನು'ನವನು ಕಲಾವಿದ

***

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಚೆನ್ನವೀರ ಕಣವಿ)

******

 

ಕವನೋತ್ಸವ – 10

ಯಾರಿವರು?

***

'ಇಗೋ ಕನ್ನಡ'  ಎಂದಾತ 

ನಮ್ಮೆಲ್ಲರ ಬಡಿದೆಬ್ಬಿಸಿದಾತ 

ಬರೆದಿಟ್ಟು ನಮಗೊಂದು ನಿಘಂಟ 

ಹೊರಟು ನಿಂತ ಧೀಮಂತ 

 

ಇಗೋ 'ಜೀವಿಈತ 

ಪಂಪರನ್ನರ ನಮಗೆ ತೋರಿಸಿದಾತ 

ಕೆಟಲರ ಕಾರ್ಯ ಮುಂದುವರೆಸಿದಾತ 

'ಶಬ್ದಸಾಗರ'ಕೆ  ಸೇತು ನಿರ್ಮಿಸಿದಾತ 

 

ಎರಡು ಮಹಾಮಾರಿಗಳ ಜಯಿಸಿದಾತ 

ಎರಡು ಮಹಾಯುದ್ಧಗಳ ಗೆದ್ದು ನಿಂತಾತ 

ಕನ್ನಡದುಳಿವೆಗೆ ಯುವಸೈನ್ಯ ಕಟ್ಟಿದಾತ 

ಶತನಮಾನಗಳು ನಿಮಗಿದೋ ನಮ್ಮೆಲ್ಲರ ತಾತ

 

(ರಚನೆಲಕ್ಷ್ಮೀನಾರಾಯಣ ಕೆ.)

(ಉತ್ತರಜಿವೆಂಕಟಸುಬ್ಬಯ್ಯ)

******

 

 

 

 

 

No comments:

Post a Comment